ನವದೆಹಲಿ: ಈ ಬಾರಿಯ ಮುಂಗಾರು ಆಗಮನ ಸಾಮಾನ್ಯವಾಗಿರಲಿದ್ದು ಜೂನ್1ಕ್ಕೂ ಮುಂಚಿತವಾಗಿ ಮುಂಗಾರು ಆಗಮನ ಸಾಧ್ಯತೆ ಇಲ್ಲ. ಕೇರಳಕ್ಕೆ ಜೂನ್4ರಂದು ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ. ಅಲ್ಲದೇ, ಮುಂದಿನವಾರ ಅರಬ್ಬೀ ಸಮದ್ರದಲ್ಲಿ ಯಾವುದೇ ಚಂಡಮಾರುತದ ಸಂಭವನೀಯತೆಯೂ ವರದಿಯಾಗಿಲ್ಲ.
ಈ ಹಿನ್ನೆಲೆ ಎಲ್ಲೆಡೆ ಮುಂಗಾರಿನ ಸಮಾನ ಹಂಚಿಕೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಹೀಗಾದಲ್ಲಿ ಕೃಷಿಯ ಮೇಲೆ ಹೆಚ್ಚಿನ ಪರಿಣಾಮವೇನು ಬೀರುವುದಿಲ್ಲವೆಂದು ಐಎಂಡಿ ಅಧಿಕಾರಿಗಳು ಹೇಳಿದ್ದಾರೆ.