News Kannada
Thursday, June 01 2023
ದೆಹಲಿ

ನವದೆಹಲಿ: ನೂತನ ಸಂಸತ್‌ ಉದ್ಘಾಟನೆ ಕಾರ್ಯಕ್ರಮಕ್ಕೆ 19 ಪಕ್ಷಗಳ ಬಹಿಷ್ಕಾರ

19 parties boycott the inauguration of the new Parliament
Photo Credit : IANS

ನವದೆಹಲಿ: ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನದ ಉದ್ಘಾಟನೆ ನೆರವೇರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗಿಟ್ಟು ಪ್ರಧಾನಿ ಅವರು ಸಂಸತ್‌ ಕಟ್ಟಡ ಉದ್ಘಾಟಿಸುತ್ತಿರುವುದನ್ನು ವಿರೋಧಿಸಿ 19 ಸಮಾನ ಮನಸ್ಕ ಪಕ್ಷಗಳು ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿವೆ ಎಂದು ಕಾಂಗ್ರೆಸ್‌ ಹೇಳಿದೆ.

ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷಗಳು “ಪ್ರಜಾಪ್ರಭುತ್ವದ ಆತ್ಮವನ್ನು ಸಂಸತ್ತಿನಿಂದ ಹೊರಹಾಕಲಾಗಿದೆ. ನಾವು ಹೊಸ ಕಟ್ಟಡದಲ್ಲಿ ಯಾವುದೇ ಮೌಲ್ಯವನ್ನು ಕಾಣುತ್ತಿಲ್ಲ. ಹೀಗಾಗಿ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸಲಿದ್ದೇವೆ ಎಂದು ತಿಳಿಸಿವೆ.

ನಿರಂಕುಶ ಪ್ರಧಾನ ಮಂತ್ರಿ ಮತ್ತು ಅವರ ಸರ್ಕಾರದ ವಿರುದ್ಧ ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ಈ ಸಂದೇಶವನ್ನು ಭಾರತದ ಜನರಿಗೆ ತಲುಪಿಸುತ್ತೇವೆ ಹೇಳಿಕೆಯಲ್ಲಿ ತಿಳಿಸಿವೆ.

ಸಂವಿಧಾನದ 79 ನೇ ವಿಧಿಯನ್ನು ಉಲ್ಲೇಖಿಸಿರುವ ವಿರೋಧ ಪಕ್ಷಗಳು ಮುರ್ಮು “ರಾಷ್ಟ್ರದ ಮುಖ್ಯಸ್ಥರು ಮಾತ್ರವಲ್ಲದೆ ಸಂಸತ್ತಿನ ಅವಿಭಾಜ್ಯ ಅಂಗವೂ ಹೌದು ಎಂದು ಹೇಳಿವೆ.

See also  ದೆಹಲಿಯಲ್ಲಿ ತಾಪಮಾನ 4.7ಕ್ಕೆ ಇಳಿಕೆ, ದಟ್ಟ ಮಂಜಿನ ಮುನ್ಸೂಚನೆ ನೀಡಿದ ಐಎಂಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು