News Kannada
Monday, December 11 2023
ದೆಹಲಿ

ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಮನೆ, ಜಮೀನು ಎನ್‌ಐಎ ವಶಕ್ಕೆ

NIA seizes Khalistani terrorist Gurpatwant Singh Pannu's house, land
Photo Credit : News Kannada

ನವದೆಹಲಿ: ಕೆನಡಾ ಮತ್ತು ಭಾರತ ಸಂಬಂಧ ಈಗಾಗಲೇ ಹಳಸಿದೆ. ಉಭಯ ರಾಷ್ಟ್ರಗಳು ವ್ಯಾಪಾರ ಸಂಬಂಧವನ್ನು ಸ್ಥಗಿತಗೊಳಿಸಿವೆ. ಈ ಮಧ್ಯೆ ಕೆನಡಾ ಮತ್ತು ಭಾರತದಲ್ಲಿ ಖಲಿಸ್ತಾನಿ ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಆಸ್ತಿಗಳ ಮೇಲೆ ದಾಳಿ ನಡೆಸಿದೆ.

ಆತ ನಿಷೇಧಿತ ಸಂಘಟನೆಯ ಸಿಖ್ ಫಾರ್ ಜಸ್ಟಿಸ್​ನ ಮುಖಂಡ. ಚಂಡೀಗಢ ಮತ್ತು ಅಮೃತಸರದಲ್ಲಿರುವ ಆತನ ಆಸ್ತಿಯನ್ನು ಎನ್‌ಐಎ ವಶಪಡಿಸಿಕೊಂಡಿದೆ. ಪನ್ನು ಅಮೃತಸರ ನಿವಾಸಿಯಾಗಿದ್ದು, ಆತನ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಎನ್​ಐಎ ಘೋಷಿಸಿದೆ.

ಭಾರತದಲ್ಲಿ ಪನ್ನು ವಿರುದ್ಧ ದೇಶವಿರೋಧಿ ಪಿತೂರಿ ಸೇರಿದಂತೆ ಒಟ್ಟು 7 ಪ್ರಕರಣಗಳು ದಾಖಲಾಗಿದ್ದು, ಅದರ ವಿವರಗಳನ್ನು ನೀಡಲಾಗಿದೆ. ಪನ್ನುನ ಅಪರಾಧಗಳ ಬಗ್ಗೆ ಕೆನಡಾಕ್ಕೆ ಹಲವಾರು ಬಾರಿ ತಿಳಿಸಲಾಗಿದೆ. ಆದರೆ ಕೆನಡಾ ಭಯೋತ್ಪಾದಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಚಂಡೀಗಢದಲ್ಲಿ, ಖಾಲಿಸ್ತಾನಿ ಗುರುಪತ್ವಂತ್ ಪನ್ನು ಹೊಂದಿರುವ ಮನೆಯನ್ನು ಎನ್ಐಎ ವಶಪಡಿಸಿಕೊಂಡಿದೆ. ಅಲ್ಲದೆ ಎನ್‌ಐಎ ಮನೆಯ ಹೊರಗೆ ಸೂಚನಾ ಫಲಕ ಹಾಕಿದೆ. ಅಲ್ಲದೆ ಆತನ ಕೃಷಿ ಭೂಮಿಯನ್ನು ವಶಕ್ಕೆ ಪಡೆದಿದೆ.

See also  ರಾಷ್ಟ್ರೀಯ ರಾಜಧಾನಿಯ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡುವ ಹೊಸ ಕಾನೂನನ್ನು ಪ್ರಶ್ನಿಸಿ ದೆಹಲಿ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು