News Kannada
Monday, December 11 2023
ದೆಹಲಿ

“ಬೇರಿಯಂ” ಪಟಾಕಿ ತಯಾರಿಕೆಗೆ ಅನುಮತಿಯಿಲ್ಲ ಎಂದ ಸುಪ್ರೀಂಕೋರ್ಟ್​

No permission to manufacture 'barium' crackers, says Supreme Court
Photo Credit : IANS

ದೆಹಲಿ: ಹಸಿರು ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಆದೇಶಕ್ಕೆ ಬೆಂಬಲ ನೀಡಿರುವ ಸುಪ್ರೀಂಕೋರ್ಟ್ “ಬೇರಿಯಂ” ಪಟಾಕಿ​ ಉತ್ಪಾದನೆ, ಮಾರಾಟಕ್ಕೆ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು. ಬೇರಿಯಂ ಬಳಸಿ ಪಟಾಕಿಗಳ ತಯಾರಿಕೆ ಮತ್ತು ಬಳಕೆಗೆ ಕೋರಿ ಸಲ್ಲಿಸಿದ ಮನವಿಯನ್ನೂ ತಿರಸ್ಕರಿಸಿತು.

ದೀಪಾವಳಿ ಹಾಗೂ ಇತರೆ ಹಬ್ಬಗಳಲ್ಲಿ ಪಟಾಕಿ ಹಚ್ಚಲು ಅವಕಾಶ ನೀಡಬೇಕೆ ಎಂಬುದರ ಕುರಿತು ಇಂದು ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ಕಳೆದ ವಾರ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್​ ಸ್ಪಷ್ಟನೆ ನೀಡಿದ್ದು, ದೆಹಲಿಯಂತಹ ರಾಜ್ಯಗಳಲ್ಲಿ ಪಟಾಕಿ ಸಂಪೂರ್ಣ ನಿಷೇಧವಿರುವ ರಾಜ್ಯಗಳಲ್ಲಿ ಹಸಿರು ಪಟಾಕಿ ಸುಡುವುದಕ್ಕೂ ಅವಕಾಶವಿಲ್ಲ, ನ್ಯಾಯಾಲಯ ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿತ್ತು.

ಇದಕ್ಕೂ ಮುನ್ನ ದೆಹಲಿಯಲ್ಲಿ ಪಟಾಕಿ ತಯಾರಿಕೆ, ಸಂಗ್ರಹ, ಮಾರಾಟ ಹಾಗೂ ಸಿಡಿಸುವಿಕೆಯ ಮೇಲೆ ಸಮಗ್ರ ನಿಷೇಧ ಹೇರಿರುವ ದೆಹಲಿ ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್​ ನಿರಾಕರಿಸಿತ್ತು.

ಪಟಾಕಿ ಸಿಡಿಸುವವರನ್ನು ಶಿಕ್ಷಿಸಿದರೆ ಸಾಲದು ಮತ್ತು ಅಧಿಕಾರಿಗಳು ಈ ಪಟಾಕಿಗಳ ಮೂಲಕ್ಕೆ ಹೋಗಬೇಕು ಎಂದು ನ್ಯಾಯಾಲಯ ಸೂಚನೆ ಕೊಟ್ಟಿದೆ. 2021ರಲ್ಲಿ ಪಟಾಕಿಗಳ ಬಳಕೆಗೆ ಯಾವುದೇ  ನಿಷೇಧವಿಲ್ಲ ಮತ್ತು ಬೇರಿಯಂ ಲವಣಗಳನ್ನು ಹೊಂದಿರುವ ಪಟಾಕಿಗಳನ್ನು ಮಾತ್ರ ನಿಷೇಸಲಾಗಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿತು.

See also  ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು