News Kannada
Monday, December 11 2023
ದೆಹಲಿ

ನಾಳೆ 9 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಹಸಿರು ನಿಶಾನೆ

PM to flag off 9 Vande Bharat trains tomorrow
Photo Credit : News Kannada

ನವದೆಹಲಿ: ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹಸಿರು ನಿಶಾನೆ ತೋರಲಿದ್ದಾರೆ.

ಈ ರೈಲುಗಳು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಗೆ ಸಂಪರ್ಕ ಕಲ್ಪಿಸುತ್ತವೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

ಉದಯಪುರ – ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ತಿರುನಲ್ವೇಲಿ-ಮಧುರೈ – ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್, ಹೈದರಾಬಾದ್ – ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ವಿಜಯವಾಡ – ಚೆನ್ನೈ (ರೇಣಿಗುಂಟಾ ಮೂಲಕ) ವಂದೇ ಭಾರತ್ ಎಕ್ಸ್‌ಪ್ರೆಸ್, ಪಾಟ್ನಾ – ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ಎಕ್ಸ್‌ಪ್ರೆಸ್, ಕಾಸರಗೋಡು – ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್, ರೂರ್ಕೆಲಾ – ಭುವನೇಶ್ವರ್ – ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್, ರಾಂಚಿ – ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಜಾಮ್‌ನಗರ-ಅಹಮದಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಈ ವಂದೇ ಭಾರತ್ ರೈಲುಗಳು ತಮ್ಮ ಕಾರ್ಯಾಚರಣೆಯ ಮಾರ್ಗಗಳಲ್ಲಿ ಅತ್ಯಂತ ವೇಗದ ರೈಲು ಆಗಿರುತ್ತವೆ ಮತ್ತು ಪ್ರಯಾಣಿಕರ ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ.

See also  ನವದೆಹಲಿ: ಡಾ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಕೇಂದ್ರ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು