News Kannada
Wednesday, November 29 2023
ದೆಹಲಿ

ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಪಂಜಾಬ್​​ ದರೋಡೆಕೋರರು!

Punjab gangsters buying weapons from terrorists!
Photo Credit : News Kannada

ದೆಹಲಿ: ಪಂಜಾಬ್ ಪೊಲೀಸರು ರಾಜ್ಯದ ಮೋಸ್ಟ್ ವಾಂಟೆಡ್ ದರೋಡೆಕೋರ ಅರ್ಷ್‌ದೀಪ್ ಸಿಂಗ್ ಅಲಿಯಾಸ್ ವಿಕ್ಕಿ ಗೌಂಡರ್ ಮತ್ತು ಅವರ ಇಬ್ಬರು ಸಹಾಯಕರನ್ನು ಹೊಡೆದುರುಳಿಸುವುದರೊಂದಿಗೆ, ಪೊಲೀಸರು ಮಾಲ್ವಾ ಪ್ರದೇಶದ ಗ್ಯಾಂಗ್‌ಗಳಿಗೆ ಕುಣಿಕೆಯನ್ನು ಬಿಗಿಗೊಳಿಸಿದ್ದಾರೆ.

ಈ ಪ್ರದೇಶವು ಈ ಗ್ಯಾಂಗ್‌ಗಳ ಚಟುವಟಿಕೆಗಳ ಕೇಂದ್ರ ಬಿಂದುವಾಗಿದೆ. ಇನ್ನು ಪಂಜಾಬ್​​​ನಲ್ಲಿ ದರೋಡೆಕೋರರು ವ್ಯಾಪರಿಗಳಿಂದ ಮತ್ತು ಜನರಿಂದ ಸುಲಿಗೆ ಮಾಡಿದ ಹಣವನ್ನು ಶಸ್ತ್ರಾಸ್ತ್ರಗಳನ್ನು ಖರೀದಿಸಲು ಬಳಸುತ್ತಿದ್ದಾರೆ ಎಂದು ಹೇಳಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಚಾರ್ಜ್ ಶೀಟ್​​ನಲ್ಲಿ ಈ ಅಂಶ ಹೊರಬಿದ್ದಿದೆ.

ಇತ್ತೀಚೆಗೆ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಖಲಿಸ್ತಾನ್ ಬೆಂಬಲಿಗರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಸಹಾಯದಿಂದ ಪಂಜಾಬ್​​​ನಲ್ಲಿರುವ ದರೋಡೆಕೋರರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಇನ್ನು ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಬಿಗಿಭದ್ರತೆ ಇರುವ ಕಾರಣ ನೇಪಾಳದ ಮೂಲಕ ಈ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದಾರೆ ಎಂದು ಎನ್​​ಐಎ ವರದಿಯಲ್ಲಿ ತಿಳಿಸಿದೆ.ಈ ಶಸ್ತ್ರಾಸ್ತ್ರಗಳನ್ನು ಪಂಜಾಬ್​​​​ ದರೋಡೆಕೋರರಿಗೆ ಕಳುಹಿಸಲು ವಿದೇಶದಲ್ಲಿ ಕುಳಿತಿರುವ ಖಲಿಸ್ತಾನಿ ಉಗ್ರರು ಆದೇಶ ನೀಡುತ್ತಿದ್ದಾರೆ ಎಂದು ತಿಳಿಸಿದೆ.

See also  ಧಾರವಾಡ: 3ನೇ ಬಾರಿ ಗೆಲುವು ದಾಖಲಿಸಿದ ಅರವಿಂದ ಬೆಲ್ಲದ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು