News Kannada
Wednesday, November 29 2023
ದೆಹಲಿ

ರೈಲು ಅಪಘಾತದ ಪರಿಹಾರ ಮೊತ್ತ 10 ಪಟ್ಟು ಹೆಚ್ಚಿಸಿದ ರೈಲ್ವೆ ಮಂಡಳಿ

Railway Board increases compensation for train accident by 10 times
Photo Credit : IANS

ಹೊಸದಿಲ್ಲಿ: ರೈಲು ಅಪಘಾತಗಳಲ್ಲಿ ಮೃತಪಟ್ಟವರು, ಗಾಯಗೊಂಡಿವರಿಗೆ ನೀಡಲಾಗುತ್ತಿದ್ದ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಳ ಮಾಡಿ ರೈಲ್ವೆ ಮಂಡಳಿಯು ಹೊಸ ಆದೇಶ ಹೊರಡಿಸಿದೆ.

ರೈಲ್ವೆ ಕಾಯಿದೆ 1989ರ ಸೆಕ್ಷನ್‌ 124ರ ಅಡಿಯಲ್ಲಿ ಈ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿದೆ. ರೈಲು ಅಪಘಾತ ಅಥವಾ ಅಹಿತಕರ ಘಟನೆಯಲ್ಲಿ ಮೃತಪಟ್ಟವರು, ಗಾಯಗೊಂಡವರ ಕುಟುಂಬದವರಿಗೆ ನೀಡುವ ಪರಿಹಾರ ಮೊತ್ತ ಹೆಚ್ಚಿಸಿ ಸೆ.18 ರಂದು ಮಂಡಳಿ ಹೊರಡಿಸಿದ ಪ್ರಕಟಣೆಯಲ್ಲಿ ವಿವರಣೆ ನೀಡಲಾಗಿದೆ.

ಮಾನವ ಸಹಿತ ಲೆವೆಲ್‌ ಕ್ರಾಸಿಂಗ್‌ನಲ್ಲಿ ಸಂಭವಿಸುವ ಅವಘಡದಲ್ಲಿ ಜೀವ ಕಳೆದುಕೊಂಡವರು, ಗಾಯಗೊಂಡವರಿಗೆ ನೀಡುವ ಪರಿಹಾರ ಮೊತ್ತವನ್ನೂ ಹೆಚ್ಚಿಸಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು 30 ದಿನಗಳಿಗೂ ಹೆಚ್ಚು ದಿನ ಆಸ್ಪತ್ರೆಗೆ ದಾಖಲಾದರೆ ದಿನವೊಂದಕ್ಕೆ 3 ಸಾವಿರ ರೂ. ಹೆಚ್ಚುವರಿ ಪರಿಹಾರ ನೀಡಲಾಗುವುದು.

ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು 1.5 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಗಾಯಾಳುಗಳಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತ 50 ಸಾವಿರ ರೂ.ನಿಂದ 2.5 ಲಕ್ಷ ರೂ.ಗೆ, ಸಣ್ಣ ಪುಟ್ಟ ಗಾಯಾಳುಗಳಿಗೆ ನೀಡುತ್ತಿದ್ದ ಪರಿಹಾರ ಮೊತ್ತ 5 ಸಾವಿರ ರೂ.ಗಳಿಂದ 50 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ರೈಲ್ವೆ ಮಂಡಳಿ ತಿಳಿಸಿದೆ.

See also  ಬಿಜೆಪಿ ಸರ್ಕಾರದ ಅರಣ್ಯ ಅಕ್ರಮ ತನಿಖೆ : ಸಚಿವ ಈಶ್ವರ ಖಂಡ್ರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು