ನವದೆಹಲಿ: ಚಂದ್ರಯಾನ ಮಿಷನ್ನ ಯಶಸ್ಸಿನ ಚರ್ಚೆಯ ವೇಳೆ ಸಂಸತ್ತಿನಲ್ಲಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ತನ್ನ ಲೋಕಸಭಾ ಸದಸ್ಯ ರಮೇಶ್ ಬಿಧುರಿ ಅವರಿಗೆ ಇಂದು(ಸೆ.೨೨) ಶೋಕಾಸ್ ನೋಟಿಸ್ ನೀಡಿದೆ.
ಅಸಂಸದೀಯ ಪದಗಳನ್ನು ಬಳಸಿದ್ದಕ್ಕಾಗಿ ದಕ್ಷಿಣ ದೆಹಲಿ ಸಂಸದರಿಂದ ಪಕ್ಷವು ಉತ್ತರವನ್ನು ಕೇಳಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಗುರುವಾರ ಲೋಕಸಭೆಯಲ್ಲಿ ಮಾತನಾಡಿದ್ದ ರಮೇಶ್ ಬಿಧುರಿ ಡ್ಯಾನಿಶ್ ಅಲಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದರು. ನಂತರ ಸ್ಪೀಕರ್ ಓಂ ಬಿರ್ಲಾ ಆ ಮಾತುಗಳನ್ನು ತೆಗೆಸಿದ್ದರು.
ರಮೇಶ್ ಬಿಧುರಿ ಅವರ ಹೇಳಿಕೆಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಸಂಸದ ಡ್ಯಾನಿಶ್ ಅಲಿ ಮೇಲೆ ಬಿಧುರಿ ಅವರ ವಿವಾದಾತ್ಮಕ ಹೇಳಿಕೆ ವೀಡಿಯೊ ವೈರಲ್ ಆಗಿದ್ದು, ಸದನದಿಂದ ಅಮಾನತು ಸೇರಿದಂತೆ ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ವಿರೋಧ ಪಕ್ಷಗಳು ಒತ್ತಾಯಿಸಿವೆ.