News Kannada
Monday, December 11 2023
ದೆಹಲಿ

ಆಕ್ಷೇಪಾರ್ಹ ಪದ ಬಳಕೆ: ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

Show cause notice issued to BJP MP Ramesh Bidhuri for using objectionable words
Photo Credit : News Kannada

ನವದೆಹಲಿ: ಚಂದ್ರಯಾನ ಮಿಷನ್‌ನ ಯಶಸ್ಸಿನ ಚರ್ಚೆಯ ವೇಳೆ ಸಂಸತ್ತಿನಲ್ಲಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ತನ್ನ ಲೋಕಸಭಾ ಸದಸ್ಯ ರಮೇಶ್ ಬಿಧುರಿ ಅವರಿಗೆ ಇಂದು(ಸೆ.೨೨) ಶೋಕಾಸ್ ನೋಟಿಸ್ ನೀಡಿದೆ.

ಅಸಂಸದೀಯ ಪದಗಳನ್ನು ಬಳಸಿದ್ದಕ್ಕಾಗಿ ದಕ್ಷಿಣ ದೆಹಲಿ ಸಂಸದರಿಂದ ಪಕ್ಷವು ಉತ್ತರವನ್ನು ಕೇಳಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಗುರುವಾರ ಲೋಕಸಭೆಯಲ್ಲಿ ಮಾತನಾಡಿದ್ದ ರಮೇಶ್‌ ಬಿಧುರಿ ಡ್ಯಾನಿಶ್‌ ಅಲಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದರು. ನಂತರ ಸ್ಪೀಕರ್ ಓಂ ಬಿರ್ಲಾ ಆ ಮಾತುಗಳನ್ನು ತೆಗೆಸಿದ್ದರು.

ರಮೇಶ್‌ ಬಿಧುರಿ ಅವರ ಹೇಳಿಕೆಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಸಂಸದ ಡ್ಯಾನಿಶ್ ಅಲಿ ಮೇಲೆ ಬಿಧುರಿ ಅವರ ವಿವಾದಾತ್ಮಕ ಹೇಳಿಕೆ ವೀಡಿಯೊ ವೈರಲ್ ಆಗಿದ್ದು, ಸದನದಿಂದ ಅಮಾನತು ಸೇರಿದಂತೆ ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ವಿರೋಧ ಪಕ್ಷಗಳು ಒತ್ತಾಯಿಸಿವೆ.

See also  ಲಕ್ನೋ: ರಾಜ್ಯ ರಾಜಧಾನಿ ಪ್ರದೇಶಕ್ಕೆ ಶೀಘ್ರದಲ್ಲೇ ಕ್ಯಾಬಿನೆಟ್ ನಿಂದ ಅನುಮೋದನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು