News Karnataka Kannada
Friday, March 29 2024
Cricket
ದೆಹಲಿ

ರಾಷ್ಟ್ರಪತಿ ಸಂಸತ್‌ ಉದ್ಘಾಟನೆ ಮಾಡುವಂತೆ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ನಿರಾಕರಣೆ

'Supreme Court' case information to be available on website in no time
Photo Credit : IANS

ನವದೆಹಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡುವಂತೆ ಲೋಕಸಭೆ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಪಿ.ಎಸ್. ನರಸಿಂಹ ಅವರನ್ನೊಳಗೊಂಡ ರಜಾಕಾಲದ ಪೀಠವು ಅರ್ಜಿದಾರರಿಗೆ ಹೀಗೆ ಹೇಳಿದೆ. ಅಂತಹ ಅರ್ಜಿ ಹಿಡಿದು ಅವು ಇಲ್ಲಿಗೇಕೆ ಬಂದಿದ್ದಾರೆ ಎಂದು ಪ್ರಶ್ನಿಸಿದೆ. ಅಲ್ಲದೆ 32 ನೇ ವಿಧಿಯ ಅಡಿಯಲ್ಲಿ ಅದನ್ನು ಅರ್ಜಿ ಪರಿಗಣಿಸಲು ನ್ಯಾಯಾಲಯವು ಆಸಕ್ತಿ ಹೊಂದಿಲ್ಲ ಎಂದು ಒತ್ತಿ ಹೇಳಿದರು. ಅಲ್ಲದೆ ಕಲಂ 79 ಇಲ್ಲಿ ಹೇಗೆ ಪ್ರಸ್ತುತವಾಗುತ್ತದೆ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.

ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುತ್ತಾರೆ. ಹೀಗಾಗಿ ಪ್ರಧಾನಿ ಕಟ್ಟಡ ಉದ್ಘಾಟಿಸುತ್ತಿರುವುದು ಸಂಪೂರ್ಣವಾಗಿ ವಿಧಿ 79 ಮತ್ತು 87 ಅನ್ನು ಉಲ್ಲಂಘಿಸುತ್ತದೆ ಎಂದು ವಕೀಲ ಸಿ.ಆರ್. ಜಯಾ ಸುಕಿನ್ ಹೇಳಿದರು. ಅಲ್ಲದೆ ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುವುದರಿಂದ ಅವರು ಕಟ್ಟಡವನ್ನು ಉದ್ಘಾಟಿಸಬೇಕು ಎಂದು ವಾದಿಸಿದರು. ಪೀಠವು ಅರ್ಜಿ ಸ್ವೀಕರಿಸಲು ನಿರಾಕರಿಸಿದ ನಂತರ, ಸುಕಿನ್ ಅರ್ಜಿಯನ್ನು ಹಿಂಪಡೆಯಲು ಒಪ್ಪಿಕೊಂಡರು. ವಕೀಲರಾದ ಸಿ.ಆರ್.ಜಯಾ ಸುಕಿನ್ ಅವರು ಸಲ್ಲಿಸಿದ ಅರ್ಜಿಯಲ್ಲಿ ಪ್ರತಿವಾದಿಗಳಾದ ಲೋಕಸಭೆ ಸಚಿವಾಲಯ, ಭಾರತ ಕೇಂದ್ರ, ಗೃಹ ಸಚಿವಾಲಯ ಮತ್ತು ಭಾರತ ಕೇಂದ್ರ, ಕಾನೂನು ಮತ್ತು ನ್ಯಾಯ ಸಚಿವಾಲಯವು ಸಂವಿಧಾನವನ್ನು ಉಲ್ಲಂಘಿಸಿದೆ, ಸಂವಿಧಾನವನ್ನು ಗೌರವಿಸುತ್ತಿಲ್ಲ ಎಂದು ಉಲ್ಲೇಕಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು