News Kannada
Monday, December 11 2023
ದೆಹಲಿ

‘ರಾಮ ಸೇತು’ ಸ್ಮಾರಕ ಘೋಷಣೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Supreme Court rejects plea seeking declaration of Ram Setu memorial
Photo Credit : News Kannada

ನವದೆಹಲಿ: ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ.

ಸ್ಮಾರಕ ಘೋಷಣೆಯ ಜೊತೆಗೆ ಆ ಸ್ಥಳದ ಸಂರಕ್ಷಣೆಗೆ ಗೋಡೆ ನಿರ್ಮಿಸಬೇಕೆಂದು ಕೋರಿ ಹಿಂದೂ ವೈಯಕ್ತಿಕ ಕಾನೂನು ಮಂಡಳಿಯ ಅಧ್ಯಕ್ಷ ಅಶೋಕ್‌ ಪಾಂಡೆ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಸುಧಾಂಶು ಧುಲಿಯಾ ಅವರಿದ್ದ ವಿಭಾಗೀಯ ನ್ಯಾಯಪೀಠವು, ‘ಇದು ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ. ಹಾಗಾಗಿ, ನ್ಯಾಯಾಲಯವು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿತು.

‘ರಾಮ ಸೇತು’ವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವೆಂದು ಘೋಷಿಸುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಬಾಕಿ ಇರುವ ಬಗ್ಗೆ ಪಾಂಡೆ, ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ‘ವಿಚಾರಣೆಯು ಬಾಕಿ ಇದ್ದರೂ ಅದರಿಂದ ನಿಮಗೆ ಏನಾಗಬೇಕಿದೆ’ ಎಂದು ಪ್ರಶ್ನಿಸಿತು.

See also  ನವದೆಹಲಿ: ಭಾರತದಲ್ಲಿ 7,591 ಹೊಸ ಕೋವಿಡ್ ಪ್ರಕರಣ, 45 ಸಾವು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು