News Kannada
Wednesday, November 29 2023
ದೆಹಲಿ

ವಿಮಾನದಲ್ಲಿ ಮಗುವಿಗೆ ಚಿಕಿತ್ಸೆ ಒದಗಿಸಿ ದೇವರಾದ ಇಬ್ಬರು ವೈದ್ಯರು

Two doctors who treated a baby on a plane
Photo Credit : News Kannada

ನವದೆಹಲಿ: ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆತನು ರೋಗಿಯ ರೋಗವನ್ನು ಪರಿಹರಿಸುವಾತ. ಮುಚ್ಚುಮರೆ ಮಾಡದೇ ರೋಗಿಯು ತನ್ನ ಅಂತರಂಗವನ್ನು ಬಿಚ್ಚಿಡುವುದು ಕೇವಲ ವೈದ್ಯನ ಮುಂದೊಂದೇ. ಹೀಗಾಗಿ ಆತನು ಕೇವಲ ರೋಗ ಪರಿಹಾರಕನಾಗಿರದೇ ರೋಗಿಯ ಸಹಚಿಂತಕನೂ ಆಗಿರುತ್ತಾನೆಂದು ಹೇಳಬಹುದು. ಅದೇ ರೀತಿ ರಾಂಚಿ-ದೆಹಲಿ ವಿಮಾನದಲ್ಲಿ ತೆರಳುತ್ತಿದ್ದಾಗ ಜನ್ಮಜಾತ ಹೃದ್ರೋಗದಿಂದ ಬಳಲುತ್ತಿದ್ದ ಮಗುವಿಗೆ ತೀವ್ರ ಉಸಿರಾಟದ ತೊಂದರೆ ಎದುರಾಗಿದೆ ಈ ವೇಳೆ ವೈದ್ಯರೂ ಆಗಿದ್ದ ಇಬ್ಬರು ಸಹ-ಪ್ರಯಾಣಿಕರು ಮಗುವಿನ ಸಹಾಯಕ್ಕೆ ಬಂದಿದ್ದು ಮಗುವನ್ನು ರಕ್ಷಿಸಿದ್ದಾರೆ.

IAS ಅಧಿಕಾರಿ ಡಾ ನಿತಿನ್ ಕುಲಕರ್ಣಿ ಮತ್ತು ರಾಂಚಿ ಸದರ್ ಆಸ್ಪತ್ರೆಯ ವೈದ್ಯ ಡಾ. ಮೊಝಮ್ಮಿಲ್ ಫಿರೋಜ್ ತುರ್ತು ವೈದ್ಯಕೀಯ ಸಹಾಯವಾಗಿ ವಯಸ್ಕರಿಗೆ ಮೀಸಲಾದ ಮಾಸ್ಕ್ ಮತ್ತು ಇತರ ಔಷಧಿಗಳನ್ನು ಬಳಸಿ ಆಮ್ಲಜನಕವನ್ನು ಪೂರೈಸಿದರು. ಒಂದು ಗಂಟೆಯ ನಂತರ ವಿಮಾನ ಲ್ಯಾಂಡ್ ಆದ ನಂತರ, ವೈದ್ಯಕೀಯ ತಂಡವು ಮಗುವನ್ನು ತಮ್ಮ ಆರೈಕೆಗೆ ತೆಗೆದುಕೊಂಡು ಆಮ್ಲಜನಕವನ್ನು ಒದಗಿಸಿತು. ಮಗುವಿನ ಹೃದಯ ಕಾಯಿಲೆಯ ಚಿಕಿತ್ಸೆಗಾಗಿ ಪೋಷಕರು ಮಗುವನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯುತ್ತಿದ್ದರು.

ದೆಹಲಿಗೆ ಹಾರಿದ ಇಪ್ಪತ್ತು ನಿಮಿಷಗಳ ನಂತರ ಇಂಡಿಗೋ ವಿಮಾನದ ಸಿಬ್ಬಂದಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ತೊಂದರೆಯಲ್ಲಿರುವ ಮಗುವಿಗೆ ವಿಮಾನದಲ್ಲಿದ್ದ ವೈದ್ಯರಿಂದ ವೈದ್ಯಕೀಯ ಸಹಾಯವನ್ನು ಪಡೆದರು. ಪ್ರಸ್ತುತ ಜಾರ್ಖಂಡ್ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ ಕುಲಕರ್ಣಿ ಮತ್ತು ರಾಂಚಿಯ ಸದರ್ ಆಸ್ಪತ್ರೆಯ ಡಾ. ಮೊಝಮ್ಮಿಲ್ ಫಿರೋಜ್ ಮಗುವನ್ನು ಉಳಿಸಲು ಮುಂದೆ ಬಂದರು.

See also  ದೆಹಲಿ: ಸರ್ವಾಧಿಕಾರಶಾಹೀ ಆದೇಶಗಳನ್ನು ಹಿಂಪಡೆಯಲು ಖಂಡಿಸಿದ ಸಿಪಿಐ ಪೊಲಿಟ್‍ ಬ್ಯುರೊ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು