News Karnataka Kannada
Thursday, April 25 2024
ಗುಜರಾತ್

ಲೈಂಗಿಕ ದೌರ್ಜನ್ಯ ಎಸಗಲು ವಿಫಲ, ಮಹಿಳೆ ಕತ್ತು ಸೀಳಿದ ಪಾಪಿ

Murder Girl 16082021
Photo Credit :

ಮೀರತ್: ಉತ್ತರ ಪ್ರದೇಶದಿಂದ ವರದಿಯಾಗಿರುವ ಭಯಾನಕ ಅಪರಾಧ ಪ್ರಕರಣವೊಂದರಲ್ಲಿ ದಲಿತ ಸಮುದಾಯಕ್ಕೆ ಸೇರಿದ 50 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ವಿಫಲರಾದ ವ್ಯಕ್ತಿಯೊಬ್ಬ ಕೊಡಲಿಯಿಂದ ಆಕೆಯ ಕತ್ತು ಸೀಳಿದ್ದಾನೆ.ಆತನಿಂದ ಬಿಡಿಸಿಕೊಳ್ಳಲು ಮಹಿಳೆ ಹೋರಾಟ ಮಾಡಿದ್ದಾಳೆ. ಚೌಧರಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ವಿಫಲನಾದ ನಂತರ ಕೊಡಲಿಯಿಂದ ಆಕೆಯ ಕತ್ತಿನ ಭಾಗಕ್ಕೆ ಹೊಡೆದಿದ್ದಾನೆ ಎಂದು ಬುಲಂದ್‌ ಶಹರ್ ಎಸ್‌ಎಸ್‌ಪಿ ಸಂತೋಷ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ ಶಹರ್ ಜಿಲ್ಲೆಯ ಜಹಾಂಗೀರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಭೋಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ದಲಿತ ಮಹಿಳೆ ಜಾನುವಾರುಗಳಿಗೆ ಮೇವು ಸಂಗ್ರಹಿಸಲು ಹೊಲಕ್ಕೆ ಹೋಗಿದ್ದರು. ಆಕೆ ಒಬ್ಬಳೇ ಇದ್ದುದನ್ನು ಕಂಡು ಅದೇ ಗ್ರಾಮದ ಲಲಿತ್ ಚೌಧರಿ ಎಂಬಾತ ಆಕೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.

ಮಹಿಳೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಮಗನಿಗೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾಳೆ.

ಆರೋಪಿ ಸದ್ಯ ಜೈಲಿನಲ್ಲಿದ್ದಾನೆ. ಆರಂಭದಲ್ಲಿ ಆತನ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಇದೀಗ, ಮಹಿಳೆ ಸಾವನ್ನಪ್ಪಿರುವುದರಿಂದ ಕೊಲೆ ಆರೋಪ ಸೇರಿಸಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು