News Kannada
Tuesday, October 03 2023
ಜಮ್ಮು-ಕಾಶ್ಮೀರ

ಶ್ರೀನಗರ: ಅಮರನಾಥ ಪ್ರವಾಹದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ ಎಂದ ಮನೋಜ್‌ ಸಿನ್ಹಾ

15 killed in Amarnath floods: Manoj Sinha
Photo Credit :

ಶ್ರೀನಗರ: ಅಮರನಾಥ ದೇಗುಲದ ಬಳಿ ಜು. 8ರಂದು ಉಂಟಾಗಿದ್ದ ಪ್ರವಾಹಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಯಾರೂ ನಾಪತ್ತೆಯಾಗಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಹೇಳಿದ್ದಾರೆ.

ಘಟನೆಯಲ್ಲಿ ಒಟ್ಟು 55 ಮಂದಿ ಗಾಯಗೊಂಡಿದ್ದಾರೆ ಮತ್ತು ಈ ಪೈಕಿ ಇಬ್ಬರು ಇನ್ನೂ ಆಸ್ಪತ್ರೆಯಲ್ಲಿದ್ದಾರೆ. ಉಳಿದವರನ್ನು ಡಿಸ್ಚಾರ್ಜ್‌ ಮಾಡಲಾಗಿದೆ.

ಕೇಂದ್ರಾಡಳಿತ ಪ್ರದೇಶ ನೀಡಿದ್ದ ಸಹಾಯವಾಣಿಗಳಿಗೆ 200ಕ್ಕೂ ಅಧಿಕ ಕರೆಗಳು ಬಂದಿವೆ. ಕೆಲವು ಯಾತ್ರಿಕರ ವಿವರ ಪರಿಶೀಲಿಸಲಾಗಿದೆ ಮತ್ತು ಕೆಲವರ ಮೊಬೈಲ್‌ ಫೋನ್‌ ಸ್ವಿಚ್‌ ಆಫ್ ಆಗಿದ್ದುದರಿಂದ ಅವರ ಇರವು ಪತ್ತೆ ಹಚ್ಚಲು ಕಷ್ಟವಾಗಿತ್ತು ಎಂದಿದ್ದಾರೆ.

See also  ಬೆಳ್ತಂಗಡಿ: 28ನೇ ವರ್ಷದ ಜ್ಞಾನವಿಕಾಸ ಮತ್ತು ಜ್ಞಾನ ಪ್ರಕಾಶ ಪುಸ್ತಕ ಲೋಕಾರ್ಪಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು