News Kannada
Monday, October 02 2023
ಕೇರಳ

ರಸ್ತೆ ಬದಿ ನಿಂತಿದ್ದ ಜನರ ಮೇಲೆ ಹರಿದ ಪಿಕಪ್ ವ್ಯಾನ್ : 2 ಸಾವು

One injured in collide between pick-up, TT vehicle
Photo Credit :

ತಿರುವನಂತಪುರಂ: ಪಿಕಪ್ ವ್ಯಾನ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಜನರ ಮೇಲೆ  ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆನಡೆದಿದೆ.

ಕೇರಳದ ಕಣ್ಣೂರು ಜಿಲ್ಲೆಯ ಕನ್ನಪುರಂನಲ್ಲಿ ಈ ಘಟನೆ ನಡೆದಿದೆ. ಪಿಕಪ್ ವ್ಯಾನ್ ಚಾಲಕ ಭಾನುವಾರ ಬೆಳಿಗ್ಗೆ ಕನ್ನಪುರಂನ ಸೇತುವೆಯ ಬಳಿ ವಾಹನದ ನಿಯಂತ್ರಣವನ್ನು ಕಳೆದುಕೊಂಡು ಅಲ್ಲಿ ನಿಂತಿದ್ದ ಜನರ ಮೇಲೆ  ಹರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕನ್ನಾಪುರದ ಅಬ್ದುಲ್ ಸಲಾಂ (28) ಮತ್ತು ನೌಶಾದ್ (32) ಎಂದು ಗುರುತಿಸಲಾಗಿದೆ.

ವ್ಯಾನ್ ಚಾಲಕ ಸಿರಾಜ್ ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ, ಅವರು ವಾಹನ ಚಲಾಯಿಸುತ್ತಿದ್ದಾಗ ನಿದ್ರೆಗೆ ಜಾರಿ, ನಿಯಂತ್ರಣ ಕಳೆದುಕೊಂಡರು ಎಂದು ಒಪ್ಪಿಕೊಂಡಿದ್ದಾರೆ.

ಭಾನುವಾರ ಬೆಳಿಗ್ಗೆ ಕನ್ನಾಪುರಂ ಸೇತುವೆಯ ಬಳಿ ರಸ್ತೆ ಬದಿಯಲ್ಲಿ ಜನರು ಹರಟೆ ಹೊಡೆಯುತ್ತಿದ್ದಾಗ ರಸ್ತೆಯಲ್ಲಿ ನೇರವಾಗಿ ಹೋಗುತ್ತಿದ್ದ ಪಿಕಪ್ ವ್ಯಾನ್ ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ನೋಡುಗರಾದ ಸುಜಾತನ್ ಹೇಳಿದರು.

ಅಬ್ದುಲ್ ಸಲಾಂ ಮತ್ತು ನೌಶಾದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಪರಿಯಾರಂನ ಕಣ್ಣೂರಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಸ್ಟಡಿಯಲ್ಲಿರುವ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕನ್ನಪುರಂ ಪೊಲೀಸರು ತಿಳಿಸಿದ್ದಾರೆ.

 

See also  ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಟಿ ಥಾಮಸ್ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು