News Kannada
Friday, March 31 2023

ಕೇರಳ

ಶಿವಶಂಕರ್ ಬಂಧನ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ಹಿನ್ನಡೆ

Setback for CM Vijayan as ED arrests Sivasankar
Photo Credit : IANS

ಕೊಚ್ಚಿ: ಕೇರಳ ಪ್ರವಾಹ ಪರಿಹಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಶಿವಶಂಕರ್ ಅವರನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಇಡಿ ಅವರನ್ನು ಕಸ್ಟಡಿಗೆ ಪಡೆಯುವ ನಿರೀಕ್ಷೆಯಿದೆ.

ಶಿವಶಂಕರ್ ಅವರು ಜನವರಿ ೩೧ ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ. ಸೋಮವಾರ ಪ್ರಾರಂಭವಾದ ಎರಡು ದಿನಗಳ ತೀವ್ರ ವಿಚಾರಣೆಯ ನಂತರ ಅವರನ್ನು ಬಂಧಿಸಲಾಗಿದೆ. ಪಿಣರಾಯಿ ವಿಜಯನ್ ಅವರ ಅಚ್ಚುಮೆಚ್ಚಿನ ಯೋಜನೆಯಾದ ‘ಲೈಫ್ ಮಿಷನ್’ನಲ್ಲಿ ನಡೆದ ಅವ್ಯವಹಾರ ಸಂಬಂಧ ತನಿಖೆ ಬಳಿಕ  ಈ ಬಂಧನ ನಡೆದಿದ್ದು, ಗುತ್ತಿಗೆ ಪಡೆಯಲು ನಾಲ್ಕು ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ಕಮಿಷನ್ ರೂಪದಲ್ಲಿ ಪಾವತಿಸಲಾಗಿದೆ ಎಂದು ಆರೋಪಿಸಲಾಗಿದೆ.

See also  ಕೇರಳದಿಂದ ಕರ್ನಾಟಕಕ್ಕೆ ತೆರಳುವವರಿಗೆ ನಿರ್ಬಂಧ ಮಧ್ಯಪ್ರವೇಶಿಸುವಂತೆ ಸರ್ಕಾರಕ್ಕೆ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು