News Kannada
Wednesday, March 29 2023

ಮಧ್ಯ ಪ್ರದೇಶ

ಉತ್ತರ ಭಾರತ ರಾಜ್ಯಗಳಲ್ಲಿ ವಾಯುಮಾಲಿನ್ಯ ಪ್ರಮಾಣ ವಿಪರೀತ ಹೆಚ್ಚಳ

Photo Credit :

ಉತ್ತರ ಭಾರತ  : ದೇಶದಲ್ಲಿ ವಾಯು ಮಾಲಿನ್ಯ ಪ್ರಮಾಣ ಭೌಗೋಳಿಕವಾಗಿ ವಿಸ್ತರಿಸಿದೆ. ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ವ್ಯಕ್ತಿಯ ಜೀವಿತಾವಧಿ ಕಡಿಮೆಯಾಗಲು ಕಾರಣವಾಗಿದೆ ಎಂದು ಹೊಸ ಅಧ್ಯಯನ ಹೇಳಿದೆ. ಯೂನಿವರ್ಸಿಟಿ ಆಫ್ ಚಿಕಾಗೋ ಸಿದ್ಧಪಡಿಸಿರುವ ‘ಏರ್‌ ಕ್ವಾಲಿಟಿ ಲೈಫ್‌ ಇಂಡೆಕ್ಸ್‌’ (ಎಕ್ಯೂಎಲ್‌ಐ) ಎಂಬ ಅಧ್ಯಯನ ವರದಿಯಲ್ಲಿ ಈ ಕಳವಳಕಾರಿ ಅಂಶಗಳಿವೆ.

ಶುದ್ಧ ಗಾಳಿಯನ್ನು ಉಸಿರಾಡುವ ವ್ಯಕ್ತಿಯ ಆಯುಷ್ಯ ಎಷ್ಟಿರಲಿದೆ ಎಂಬ ಬಗ್ಗೆ ವಿಶ್ವವಿದ್ಯಾಲಯ ಅಧ್ಯಯನ ಕೈಗೊಂಡಿತ್ತು.
ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ವಾಯುಮಾಲಿನ್ಯ ಪ್ರಮಾಣದಲ್ಲಿ ವಿಪರೀತ ಹೆಚ್ಚಳ ಕಂಡುಬಂದಿದೆ. ಈ ಎರಡು ರಾಜ್ಯಗಳಲ್ಲಿನ ವ್ಯಕ್ತಿಯ ಸರಾಸರಿ ಆಯಸ್ಸು 2.5 ರಿಂದ 2.9 ವರ್ಷಗಳಷ್ಟು ಕಡಿಮೆಯಾಗಲು ವಾಯುಮಾಲಿನ್ಯ ಕಾರಣವಾಗಿದೆ ಎಂದು ಈ ಅಧ್ಯಯನ ಹೇಳಿದೆ.

ಗಂಗಾ ನದಿ ಪಾತ್ರದಲ್ಲಿ ದೇಶದ ಒಟ್ಟು ಜನಸಂಖ್ಯೆಯ ಶೇ 40ರಷ್ಟು ಜನರು ವಾಸ ಮಾಡುತ್ತಿದ್ದಾರೆ. ವಿಶ್ವದ ಇತರ ಯಾವುದೇ ಪ್ರದೇಶಕ್ಕೆ ಹೋಲಿಸಿದರೂ, ಈ ಪ್ರದೇಶದಲ್ಲಿ ಮಾಲಿನ್ಯದ ಪ್ರಮಾಣವೂ ಅಧಿಕ’ ಎಂದು ವರದಿಯಲ್ಲಿ ವಿವರಿಸಲಾಗಿದೆ.
ಉತ್ತರ ಭಾರತದಲ್ಲಿ 2019ರಲ್ಲಿ ದಾಖಲಾಗಿದ್ದ ಮಾಲಿನ್ಯದ ಮಟ್ಟ ಅದೇ ಪ್ರಮಾಣದಲ್ಲಿಯೇ ಮುಂದುವರಿದರೆ, ಆ ಭಾಗದ ಜನರು ತಮ್ಮ ಆಯುಷ್ಯದಲ್ಲಿ 9ಕ್ಕೂ ಹೆಚ್ಚು ವರ್ಷಗಳನ್ನು ಕಳೆದುಕೊಳ್ಳುವರು ಎಂದು ಈ ಅಧ್ಯಯನ ನಡೆಸಿರುವ ತಜ್ಞರು ಎಚ್ಚರಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪ್ರಕಾರ ಮಾಲಿನ್ಯದ ಪ್ರಮಾಣವನ್ನು ಕಡಿಮೆ ಮಾಡಿದರೆ, ಭಾರತ, ಬಾಂಗ್ಲಾದೇಶ, ನೇಪಾಳ ಹಾಗೂ ಪಾಕಿಸ್ತಾನಗಳಲ್ಲಿ ವಾಸಿಸುವ ವ್ಯಕ್ತಿ 5.6 ವರ್ಷಗಳಷ್ಟು ಹೆಚ್ಚು ಅವಧಿಗೆ ಜೀವಿಸಲು ಸಾಧ್ಯ ಎಂದೂ ಹೇಳಿದ್ದಾರೆ.

See also  ನವೆಂಬರ್ 29ರಿಂದ ಶಾಲಾ ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಪುನರಾರಂಭ; ಕೇಜ್ರಿವಾಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು