News Kannada
Saturday, March 25 2023

ಮಹಾರಾಷ್ಟ್ರ

ನಾಗ್ಪುರ: ಪ್ರೇಯಸಿಯನ್ನು ಕೊಲೆ ಮಾಡಲು ಯತ್ನಿಸಿದ ಯುವಕ

Photo Credit :

ನಾಗ್ಪುರ : 23 ವರ್ಷದ ವ್ಯಕ್ತಿಯೊಬ್ಬ ತನ್ನೊಂದಿಗೆ ವೈಮನಸ್ಯ ಹೊಂದಿದ್ದ ಪ್ರೇಯಸಿಯನ್ನು ನೇಣು ಹಾಕಲು ಯತ್ನಿಸಿರುವುದಾಗಿ ಸಿಟಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೊರಾಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆದೇಶ್ ದುರ್ಗಾದಾಸ್ ತಿರ್ಪುಡೆ (23) ಎಂಬಾತ ಸದ್ಯ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನದ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದ ನಂತರ ತಿರ್ಪುಡೆಯೊಂದಿಗೆ ಆತನ ಪ್ರೇಯಸಿ ಮಾತು ನಿಲ್ಲಿಸಿದ್ದಳು. ಇದರಿಂದ ಆತ ಕೋಪಗೊಂಡಿದ್ದ. ‘ಶುಕ್ರವಾರ ಆಕೆಯ ಮನೆಗೆ ನುಗ್ಗಿದ ಆತ, ಆಕೆಯ ಕೆನ್ನೆಗೆ ಬಾರಿಸಿದ್ದಾನೆ ಮತ್ತು ದುಪ್ಪಟ್ಟಾದಿಂದ ಸೀಲಿಂಗ್ ಫ್ಯಾನಿಗೆ ನೇಣು ಬಿಗಿಯಲು ಯತ್ನಿಸಿದ್ದಾರೆ. ಅದೃಷ್ಟವಶಾತ್, ಯುವತಿಯ ಸಂಬಂಧಿ ಸ್ಥಳಕ್ಕೆ ಭೇಟಿ ನೀಡಿದಾಗ ಅವಘಡ ತಪ್ಪಿದೆ. ಈ ವೇಳೆ ತಿರ್ಪುಡೆ ಅಲ್ಲಿಂದ ಪರಾರಿಯಾಗಿದ್ದಾನೆ. ಮುಂದಿನ ತನಿಖೆ ಕೈಗೊಳ್ಳಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ಭಾರತ ರತ್ನ ಲತಾ ಮಂಗೇಶ್ಕರ್ ಮತ್ತಷ್ಟು ಗಂಭೀರ; ಆಸ್ಪತ್ರೆಗೆ ಗಣ್ಯರು, ಕಲಾವಿದರು ದೌಡು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು