News Kannada
Thursday, June 01 2023
ಮಹಾರಾಷ್ಟ್ರ

ನಾಸಿಕ್: ಬಸ್-ಟ್ರಕ್ ನಡುವೆ ಅಪಘಾತ 10 ಸಾವು, ತನಿಖೆಗೆ ಸಿಎಂ ಆದೇಶ

Couple seriously injured in bike accident
Photo Credit : Pixabay

ನಾಸಿಕ್: ಶಿರಡಿ ಸಾಯಿಬಾಬಾ ಭಕ್ತರನ್ನು ಕರೆದೊಯ್ಯುತ್ತಿದ್ದ ಖಾಸಗಿ ಐಷಾರಾಮಿ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಣೆಯ ಅಂಬರ್ ನಾಥ್ ನಿಂದ ಅಹ್ಮದ್ ನಗರ ಜಿಲ್ಲೆಯ ದೇವಾಲಯ ಪಟ್ಟಣವಾದ ಶಿರಡಿಗೆ ತೆರಳುತ್ತಿದ್ದಾಗ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಘೋಷಿಸಿದ್ದಾರೆ.

ಶಿಂಧೆ ಅವರು ಅಪಘಾತ, ಕಾರಣಗಳು ಮತ್ತು ಸಂಬಂಧಿತ ಅಂಶಗಳ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಕನಿಷ್ಠ ಆರು ಮಹಿಳೆಯರು, ಒಬ್ಬ ಪುರುಷ ಮತ್ತು ಉಳಿದವರು ಮಕ್ಕಳು.

ಗಾಯಗೊಂಡವರನ್ನು ಸಿನ್ನಾರ್ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಕೆಲವು ಗಂಭೀರ ಗಾಯಗೊಂಡವರನ್ನು ಪುಣೆ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

See also  ತಿರುವನಂತಪುರಂ: ರೈಲ್ವೆ ಸೇತುವೆಯಿಂದ ಬಿದ್ದು ಓರ್ವ ಮಹಿಳೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು