ಮುಂಬೈ: ನೂತನ ಸಂಸತ್ ಭವನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿ ಟ್ವೀಟ್ ಮಾಡಿರುವ ಬಾಲಿವುಡ್ ನಟ ಶಾರುಖ್ ಖಾನ್ ಕುರಿತು ಕಾಂಗ್ರೆಸ್ ಕೆಂಡಾಮಂಡಲವಾಗಿದೆ.
ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ಪಂಖುರಿ ಪಾಠಕ್ ಕಿಡಿಕಾರಿದ್ದು, “ನಿಮ್ಮ ಪುತ್ರನನನ್ನು ವಿನಾಕಾರಣ ಜೈಲಿಗೆ ಕಳಿಸಿದಾಗ ನಾವು ನಿಮ್ಮ ಬೆಂಬಲಕ್ಕೆ ನಿಂತಿದ್ದೆವು. ನಿಮ್ಮ ಚಿತ್ರವನ್ನು ಬಹಿಷ್ಕರಿಸಿದಾಗ ನಾವು ಬೆಂಬಲ ಸೂಚಿಸಿದೆವು. ಧರ್ಮದ ಕಾರಣಕ್ಕಾಗಿ ನಿಮ್ಮನ್ನು ಟಾರ್ಗೆಟ್ ಮಾಡಿದಾಗ, ನಾವು ನಿಮಗೆ ಸಹಕಾರ ನೀಡಿದೆವು. ಇದೀಗ ನೀವು ಏನು ಮಾಡಿದ್ದೀರಿ? ಅದನ್ನೇ ಪಡೆಯಲು ಅರ್ಹರು. ಇನ್ಯಾವತ್ತು ನೀವು ಕಿಂಗ್ ಅಲ್ಲ,” ಎಂದು ಟೀಕಿಸಿದ್ದಾರೆ.