News Kannada
Monday, September 25 2023
ನಾಗಾಲ್ಯಾಂಡ್

ನಾಗಾಲ್ಯಾಂಡ್ ​​​:13 ನಾಗರಿಕರ ಹತ್ಯೆ ಪ್ರಕರಣ SITಗೆ ನೀಡಿದ ಅಮಿತ್​​ ಶಾ

Manipur violence: Amit Shah calls all-party meet on June 24
Photo Credit :

ನಾಗಾಲ್ಯಾಂಡ್​​​ನಲ್ಲಿ ಭದ್ರತಾ ಪಡೆಗಳು 13 ನಾಗರಿಕರನ್ನು ಭಯೋತ್ಪಾದಕರು ಎಂದು ಭಾವಿಸಿ ಹತ್ಯೆ ಮಾಡಿರುವ ಪ್ರಕರಣದ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಇಂದು ಸಂಸತ್​​ನಲ್ಲಿ ಮಾಹಿತಿ ನೀಡಿದರು.

ಭವಿಷ್ಯದಲ್ಲಿ ಇಂತಹ ಯಾವುದೇ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಲು ಎಲ್ಲ ಏಜೆನ್ಸಿಗಳಿಗೆ ಸೂಚನೆ ನೀಡಲಾಗಿದ್ದು, ಈ ದುರದೃಷ್ಟಕರ ಘಟನೆ ಬಗ್ಗೆ ಕೇಂದ್ರ ಸರ್ಕಾರ ವಿಷಾದ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

ಡಿಸೆಂಬರ್​​​ 4ರಂದು ಆ ಪ್ರದೇಶದಲ್ಲಿ ಉಗ್ರರ ಚಲನವಲನದ ಬಗ್ಗೆ ಸೇನೆಗೆ ಮಾಹಿತಿ ಸಿಕ್ಕಿತ್ತು. ಇದರ ಆಧಾರದ ಮೇಲೆ 21 ಕಮಾಂಡೋಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು.ಇದೇ ವೇಳೆ, ಸ್ಥಳಕ್ಕೆ ವಾಹನವೊಂದು ಬಂದಿದ್ದು, ನಿಲ್ಲುವಂತೆ ಸೂಚನೆ ನೀಡಲಾಗಿತ್ತು. ಆದರೆ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದರಿಂದ ಉಗ್ರರು ಇರಬಹುದು ಎಂಬ ಶಂಕೆಯ ಮೇರೆಗೆ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆಂದು ಗೃಹ ಸಚಿವರು ಮಾಹಿತಿ ನೀಡಿದರು.

ವಾಹನದಲ್ಲಿದ್ದ ಎಂಟು ಜನರ ಪೈಕಿ ಆರು ಮಂದಿ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ತಪ್ಪಾದ ಗುರುತು ಎಂದು ಕಂಡುಬಂದಿದ್ದು, ಗಾಯಗೊಂಡಿರುವ ಇಬ್ಬರನ್ನ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಪ್ರಕರಣದ ಸುದ್ದಿ ತಿಳಿದ 250ಕ್ಕೂ ಗ್ರಾಮಸ್ಥರು ಸೇನಾ ಘಟಕವನ್ನು ಸುತ್ತುವರಿದು ಅಲ್ಲಿನ ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ದಾಳಿ ನಡೆಸಿದರು.ಈ ವೇಳೆ ಓರ್ವ ಯೋಧ ಸಾವನ್ನಪ್ಪಿದ್ದು, ಕೆಲ ಯೋಧರು ಗಾಯಗೊಂಡಿದ್ದಾರೆ.

ಪರಿಸ್ಥಿತಿ ಹತೋಟಿಗೆ ತರುವ ಉದ್ದೇಶದಿಂದ ಸೇನೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಮತ್ತೆ ಏಳು 7 ನಾಗರಿಕರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾಗಿ ಮಾಹಿತಿ ನೀಡಿದರು.

ಪ್ರಕರಣವನ್ನ ಈಗಾಗಲೇ ಎಸ್​​ಐಟಿಗೆ ನೀಡಲಾಗಿದ್ದು, ಮುಂದಿನ 30 ದಿನದೊಳಗೆ ಸಂಪೂರ್ಣ ತನಿಖಾ ವರದಿ ಒಪ್ಪಿಸುವಂತೆ ಸೂಚನೆ ನೀಡಲಾಗಿದೆ ಎಂದಿರುವ ಗೃಹ ಸಚಿವರು, ಸ್ಥಳದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ ಎಂಬ ಮಾಹಿತಿ ನೀಡಿದರು.

See also  ಸೆ.2ರಂದು ದಾವಣಗೆರೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು