News Kannada
Thursday, November 30 2023
ದೇಶ

ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಪೈಪ್‌ ಮೂಲಕ ಆಹಾರ, ಆಮ್ಲಜನಕ ಪೂರೈಕೆ

Supply of food and oxygen through pipes to the workers trapped in the tunnel
Photo Credit : News Kannada

ಉತ್ತರಕಾಶಿ: ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಈ ಪೈಪ್ ನ ಮೂಲಕ, 8 ದಿನಗಳಿಂದ ಸುರಂಗದ ಒಳಗೆ ಸಿಲುಕಿರುವ 41 ಕಾರ್ಮಿಕರ ದೃಶ್ಯಗಳನ್ನು ಪಡೆಯುವುದಕ್ಕೂ ಸಾಧ್ಯವಾಗಲಿದೆ.

ಇದಕ್ಕೂ ಮುನ್ನ ಸುರಂಗದ ಮೇಲ್ಭಾಗದಲ್ಲಿದ್ದ 4 ಇಂಚಿನ ಟ್ಯೂಬ್ ಮೂಲಕ ಆಮ್ಲಜನಕ ಹಾಗೂ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಅಂಶು ಮನೀಶ್ ಖಲ್ಖೋ ಸ್ಥಳಕ್ಕೆ ಭೇಟಿ ನೀಡಿದ್ದು, ಇತ್ತೀಚಿನ ಬೆಳವಣಿಗೆಯನ್ನು ರಕ್ಷಣಾ ಕಾರ್ಯಾಚರಣೆಯೆಡೆಗೆ ಮೊದಲ ಪ್ರಗತಿ ಎಂದು ಹೇಳಿದ್ದಾರೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ದ ಡ್ರೋನ್‌ಗಳು ಮತ್ತು ರೋಬೋಟ್‌ಗಳನ್ನು ಸಹ ಸ್ಥಳಕ್ಕೆ ತರಲಾಗಿದ್ದು, ಸಿಲುಕಿರುವ ವ್ಯಕ್ತಿಗಳು ಅಲ್ಲಿಂದ ಹೊರಬರುವುದಕ್ಕೆ ಬೇರೆ ಮಾರ್ಗಗಳ ಸಾಧ್ಯತೆಯನ್ನು ಪರಿಶೀಲಿಸಲಾಗಿದೆ. ಈ ನಡುವೆ ಪ್ರಧಾನಿ ಅವರು ಕೂಡ ದೂರವಾಣಿ ಮೂಲಕ ಕಾರ್ಯಾಚರಣೆ ಕುರಿತು ವಿಚಾರಣೆ ನಡೆಸಿದ್ದಾರೆ.

See also  ಕಾನ್ಪುರ: ವಿಷಪೂರಿತ ಅನಿಲ ಉಸಿರಾಡಿ ಮೂವರು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು