News Karnataka Kannada
Thursday, April 25 2024
ತಮಿಳುನಾಡು

ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬೇಡಿ; ಪ್ರಧಾನಿ ಮೋದಿಗೆ ಸ್ಟಾಲಿನ್‌ ಒತ್ತಾಯ

Chennai: The Central government should not force Hindi to be imposed, says M.K. Stalin
Photo Credit :

ಚೆನ್ನೈ : ಬೆಂಗಳೂರು ಸೇರಿದಂತೆ ಇನ್ನಿತರ ರಾಜ್ಯಗಳಿಗೆ ಕುಡಿಯುವ ನೀರು ಒದಗಿಸುವ ಕರ್ನಾಟಕ ಸರ್ಕಾರದ ‘ಮೇಕೆದಾಟು’ ಯೋಜನೆಗೆ ಅನುಮೋದನೆ ನೀಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಒತ್ತಾಯಿಸಿದೆ.

ದೆಹಲಿ ಪ್ರವಾಸದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಕುಡಿಯುವ ನೀರಿನ ಹೆಸರಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಮುಂದಾಗಿರುವ ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯು 2018ರ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಯು ತಮಿಳುನಾಡು ರೈತ ಸಮುದಾಯದ ಹಿತಾಸಕ್ತಿ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.

ಅಲ್ಲದೆ ವರ್ಷದಲ್ಲಿ ಉತ್ತಮ ಮಳೆಯಾಗಲಿ ಅಥವಾ ಸಾಮಾನ್ಯ ಮಳೆಯೇ ಆಗಲಿ, ತನ್ನ ಪಾಲಿನ ನೀರನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡುವುದಿಲ್ಲ ಎಂದು ದೂರಿದ ಅವರು, ಮೇಕೆದಾಟು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕದ ಯಾವುದೇ ಯೋಜನೆಗಳಿಗೆ ಅನುಮೋದನೆ ನೀಡದಂತೆ ಕೇಂದ್ರ ಜಲಶಕ್ತಿ ಇಲಾಖೆಗೆ ನಿರ್ದೇಶನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಜೊತೆಗೆ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬಾರದು ಎಂದು ಕಾವೇರಿ ನಿರ್ವಹಣೆ ಪ್ರಾಧಿಕಾರಕ್ಕೂ ಸೂಚನೆ ನೀಡಬೇಕು. ತಮಿಳುನಾಡು ಸರ್ಕಾರದ ಅನುಮತಿಯಿಲ್ಲದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಯಾವುದೇ ಯೋಜನೆ ಕೈಗೊಳ್ಳಬಾರದು ಎಂದು ಅವರು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು