News Kannada
Monday, December 11 2023
ತಮಿಳುನಾಡು

ರಾಷ್ಟ್ರಪತಿ ದ್ರೌಪದಿ ಮುರ್ಮು ವಿಧವೆ: ಮತ್ತೆ ವಿವಾದಿತ ಹೇಳಿಕೆ ನೀಡಿದ ಉದಯನಿಧಿ

Udhayanidhi's controversial remarks on President Draupadi Verma
Photo Credit : News Kannada

ಚೆನ್ನೈ: ದಿನನಿತ್ಯ ತಮ್ಮ ಹೇಳಿಕೆಗಳ ಮೂಲಕವೇ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಇದೀಗ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ನೂತನ ಸಂಸತ್‌ ಭವನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ. ಇದಕ್ಕೆ ಮುಖ್ಯ ಕಾರಣ ದ್ರೌಪದಿ ಮುರ್ಮು ವಿಧವೆ. ಇಷ್ಟೇ ಅಲ್ಲ ಆದಿವಾಸಿ ಮಹಿಳೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ನೂತನ ಸಂಸತ್ ಭವನ ಉದ್ಘಾಟನೆಗೆ ತಮಿಳುನಾಡಿನ ಅಧೀನಂ ಸ್ವಾಮಿಜಿಗಳನ್ನು ಕರೆಸಿದ್ದಾರೆ. ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ನೀಡಿಲ್ಲ. ದ್ರೌಪದಿ ಮುರ್ಮು ವಿಧವೆ ಹಾಗೂ ಆದಿವಾಸಿ ಮಹಿಳೆ ಅನ್ನೋ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ಕರೆಸಿಲ್ಲ. ಇದು ಸನಾತನ ಧರ್ಮವೇ ಎಂದು ಉದಯನಿಧಿ ಸ್ಟಾಲಿನ್ ಪ್ರಶ್ನಿಸಿದ್ದಾರೆ. ಈ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿ ಪಕ್ಷ ದ್ರೌಪದಿ ಮುರ್ಮು ಅವರನ್ನು ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಅನ್ನೋದನ್ನು ರಾಜಕೀಯವಾಗಿ ಬಳಸಿಕೊಳ್ಳಿ. ಆದರೆ ಮುರ್ಮು ವಿಧವೆ, ಆದಿವಾಸಿ ಮಹಿಳೆ ಎಂದು ಕೀಳು ಮಟ್ಟದ ರಾಜಕೀಯ ಪ್ರದರ್ಶಿಸಬೇಡಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಟೀಕೆ ವ್ಯಕ್ತವಾಗಿದೆ. ಇದೇ ವೇಳೆ ರಾಜ್ಯಸಭೆಯಲ್ಲಿ ಸ್ಪೀಕರ್, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಈ ಕುರಿತು ಆರೋಪ ಮಾಡುತ್ತಿರುವವರಿಗೆ ಖಡಕ್ ಉತ್ತರ ನೀಡಿದ್ದಾರೆ. ಈ ಉತ್ತರವನ್ನು ಕೇಳಿಸಿಕೊಳ್ಳಿ ಎಂದು ಉದಯನಿಧಿ ಸ್ಟಾಲಿನ್‌ಗೆ ಸಲಹೆ ನೀಡಿದ್ದಾರೆ.

See also  ಬೆಳ್ತಂಗಡಿ: ಅಕ್ರಮ ಗೋವು ಸಾಗಾಟ, ಮೂವರನ್ನು ಬಂಧಿಸಿದ ಪೊಲೀಸರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು