ಚೆನ್ನೈ, ಮೇ 20: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಸೋಲನ್ನು ಮರೆಮಾಚಲು ಕೇಂದ್ರ ಸರ್ಕಾರ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಹೇಳಿದ್ದಾರೆ.
“500 ಅನುಮಾನಗಳು, 1,000 ರಹಸ್ಯಗಳು ಮತ್ತು 2,000 ಪ್ರಮಾದಗಳು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿನ ಶೋಚನೀಯ ವೈಫಲ್ಯವನ್ನು ಮರೆಮಾಚುವ ಒಂದು ತಂತ್ರ” ಎಂದು ಕಿಡಿಕಾರಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ನಂತರ, ದ್ರಾವಿಡ ಭೂದೃಶ್ಯದಿಂದ ಬಿಜೆಪಿ ಅಳಿಸಿಹೋಗಿದೆ ಎಂದು ಸ್ಟಾಲಿನ್ ಹೇಳಿದರು.
ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅಪನಗದೀಕರಣ ಪ್ರಯತ್ನವಾಗಿದೆ ಎಂದು ಅವರು ಹೇಳಿದರು.