News Kannada
Wednesday, March 22 2023

ತೆಲಂಗಾಣ

ಕೊಯಮತ್ತೂರು:ವಿಧವೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Photo Credit :

ಕೊಯಮತ್ತೂರು: ತಮಿಳುನಾಡಿನ ತಿರುಪುರದ ಕೆವಿಆರ್‌ ನಗರದಲ್ಲಿ ವಿಧವೆ ಮನೆಯ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ತಿರುನಲ್ವೇಲಿ ಮೂಲದ ದೈವನೈ(45) ಎಂದು ಗುರುತಿಸಲಾಗಿದೆ. ಅವರು ತಮ್ಮ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ವರದಿಗಳ ಪ್ರಕಾರ, ಆಕೆಯ ಪ್ರೇಮಿ ವಿವಾಹವಾಗಲು ನಿರಾಕರಿಸಿದ ನಂತರ ಹೀಗೆ ಜೀವ ಕಳೆದುಕೊಂಡಿದ್ದಾಳೆ.

15 ವರ್ಷಗಳ ಹಿಂದೆ ಅವರ ಪತಿ ತೀರಿಕೊಂಡಿದ್ದು, ಬನಿಯನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ದೈವನೈ ವಿವಾಹಿತ ಸಹೋದ್ಯೋಗಿಯೊಂದಿಗೆ ಸಂಬಂಧ ಬೆಳೆಸಿಕೊಂಡಳು.

ಆತನಿಗೆ ಮದುವೆಯಾಗುವಂತೆ ಕೇಳಿಕೊಂಡರೂ ಆತ ಸ್ಪಂದಿಸಿರಲಿಲ್ಲ. ಕೊನೆಗೆ ತಿರುಪುರ್ ದಕ್ಷಿಣದ ಮಹಿಳಾ ಪೊಲೀಸರನ್ನು ಸಂಪರ್ಕಿಸಿದ್ದಾಳೆ. ನಂತರ ಪೊಲೀಸರು ಇಬ್ಬರೊಂದಿಗೆ ಸಂವಾದ ನಡೆಸಿ ಜಗಳವಾಡದಂತೆ ಸಲಹೆ ನೀಡಿದ್ದಾರೆ.

ಆದರೂ ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದರಿಂದ ದೈವನೈ ಹತಾಶೆಯಿಂದ ಬಾಡಿಗೆ ಮನೆಯಿಂದ ಹೊರಬಂದು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ದೈವನೈಯ್ ತಾನೇ ಬೆಂಕಿ ಹಚ್ಚಿಕೊಳ್ಳುತ್ತಿರುವುದನ್ನು ತೋರಿಸುವ ದೃಶ್ಯವು ಸೈಬರ್‌ಸ್ಪೇಸ್‌ನಲ್ಲಿ ವೈರಲ್ ಆಗಿದೆ. ಮಾಹಿತಿ ಪಡೆದ ಪೊಲೀಸರು ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

See also  ಕಲಬುರಗಿ: ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು