News Kannada
Thursday, June 01 2023
ತೆಲಂಗಾಣ

ತೆಲಂಗಾಣದಲ್ಲಿ ಬೀದಿ ನಾಯಿ ದಾಳಿ, 8 ವರ್ಷದ ಬಾಲಕ ಸಾವು

8-year-old boy killed in stray dog attack in Telangana
Photo Credit : Pixabay

ಹೈದರಾಬಾದ್: ಬೀದಿ ನಾಯಿಗಳ ದಾಳಿಯಿಂದ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ ಹನಮಕೊಂಡ ಜಿಲ್ಲೆಯ ಕಾಜಿಪೇಟ್ ರೈಲ್ವೆ ಕ್ವಾರ್ಟರ್ಸ್ ಬಳಿ ಈ ಘಟನೆ ನಡೆದಿದೆ.

ಮರದ ಕೆಳಗೆ ಏಕಾಂಗಿಯಾಗಿ ಮಲಗಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡಿತು. ಅಸಹಾಯಕ ಹುಡುಗ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಸ್ಥಳದಲ್ಲೇ ಸಾವನ್ನಪ್ಪಿದನು.

ಮೃತನನ್ನು ಉತ್ತರ ಪ್ರದೇಶದ ವಲಸೆ ಕಾರ್ಮಿಕರ ಮಗ ಚೋಟು ಎಂದು ಗುರುತಿಸಲಾಗಿದೆ. ಕುಟುಂಬವು ಗುರುವಾರ ರಾತ್ರಿ ಕಾಜಿಪೇಟ್ ರೈಲ್ವೆ ನಿಲ್ದಾಣಕ್ಕೆ ಬಂದು ಹತ್ತಿರದ ಉದ್ಯಾನವನದಲ್ಲಿ ಮಲಗಿತ್ತು. ಬಾಲಕನ ಪೋಷಕರು ಮಗುವನ್ನು ಬಿಟ್ಟು ಬಹಿರ್ದಸೆಗೆ ಹೋಗಿದ್ದರು.

ಅವರು ಹಿಂದಿರುಗಿದಾಗ, ಹುಡುಗ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಪೋಷಕರು ಅವನನ್ನು ಆಸ್ಪತ್ರೆಗೆ ಕರೆದೊಯ್ದರು ಆದರೆ ಅವನು ಅದಾಗಲೇ ಸಾವನ್ನಪ್ಪಿದ್ದನು.

ಸರ್ಕಾರದ ಮುಖ್ಯ ಸಚೇತಕ ವಿನಯ್ ಭಾಸ್ಕರ್ ಮತ್ತು ಮೇಯರ್ ಗುಂಡು ಸುಧಾರಾಣಿ ಆಸ್ಪತ್ರೆಗೆ ಭೇಟಿ ನೀಡಿ ಬಾಲಕನ ಪೋಷಕರಿಗೆ ಸಾಂತ್ವನ ಹೇಳಿದರು.

See also  ಹೈದರಾಬಾದ್: ತೆಲಂಗಾಣ ವಿಮೋಚನಾ ದಿನ ಆಚರಣೆಗೆ ಕೇಂದ್ರ ಸರ್ಕಾರ ನಿರ್ಧಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು