ಇಂಫಾಲ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಉಗ್ರಗಾಮಿ ಕೃತ್ಯಗಳಿಂದ ಜನರನ್ನು ರಕ್ಷಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಬಿಷ್ಣುಪುರ ಜಿಲ್ಲೆಯಲ್ಲಿರುವ ಪಿಡಬ್ಲ್ಯುಡಿ ಸಚಿವ ಕೊಂತೌಜಮ್ ಗೋವಿಂದದಾಸ್ ಅವರ ಮನೆಯನ್ನು ಮನೆಯನ್ನು ಬುಧವಾರ ಧ್ವಂಸಗೊಳಿಸಲಾಗಿದೆ.
ಯುವ ವ್ಯವಹಾರ ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಗೋವಿಂದಸ್ ಅವರು ಬಿಜೆಪಿಯ ಹಿರಿಯ ಸದಸ್ಯರಾಗಿದ್ದಾರೆ.
ಬಿಷ್ಣುಪುರ್ ಜಿಲ್ಲೆಯ ನಿಂಗ್ತೌಖೋಂಗ್ ಬಜಾರ್ ಪ್ರದೇಶದಲ್ಲಿ ಸುಮಾರು 100 ಜನರು, ಬಹುತೇಕ ಮಹಿಳೆಯರು, ಮನೆಗೆ ನುಗ್ಗಿ ಗೇಟ್, ಕಿಟಕಿಗಳು, ಕೆಲವು ಪೀಠೋಪಕರಣಗಳು, ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ವಾಹನಗಳನ್ನು ಹಾನಿಗೊಳಿಸಿದ್ದಾರೆ. ಈ ವೇಳೆ ಸಚಿವರು ಮನೆಯಲ್ಲಿ ಇರಲಿಲ್ಲ.
ಮೇ 3 ರಂದು ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯದ ಜನರ ನಡುವೆ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದರು. ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರತ್ಯೇಕ ಘಟನೆಗಳಲ್ಲಿ, ತೇರಾ ಖೋಂಗ್ಸಾಂಗ್ಬಿಯಲ್ಲಿ ಮಂಗಳವಾರ ಭದ್ರತಾ ಪಡೆಗಳ ವಾಹನ ಸಂಚಾರಕ್ಕೆ ಮಹಿಳೆಯರು ಅಡ್ಡಿಪಡಿಸಿದ ಘಟನೆ ನಡೆದಿದೆ.