News Karnataka Kannada
Saturday, April 20 2024
Cricket
ಉತ್ತರ ಪ್ರದೇಶ

ಬಿಜೆಪಿ ಶಾಸಕನಿಗೆ ಕಪಾಳಮೋಕ್ಷ ಮಾಡಿದ ರೈತ!

Bjp
Photo Credit :

ಲಕ್ನೋ: ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದ ಉತ್ತರ ಪ್ರದೇಶದ ಸದರ್ ಕ್ಷೇತ್ರದ ಬಿಜೆಪಿ ಶಾಸಕ ಪಂಕಜ್ ಗುಪ್ತಗೆ ರೈತನೋರ್ವ ಸಾರ್ವಜನಿಕ ಸಭೆಯಲ್ಲೇ ಕಪಾಳಮೋಕ್ಷ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ವೇದಿಕೆ ಮೇಲೆ ಕುಳಿತಿದ್ದ ವೇಳೆ ಅಲ್ಲಿಗೆ ಬಂದ ವೃದ್ಧ ರೈತನೋರ್ವ ಪಂಕಜ್ ಗುಪ್ತ ಅವರ ಕೆನ್ನೆಗೆ ಹೊಡೆದಿದ್ದಾನೆ. ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆಯ ವೀಡಿಯೋ ಇದಾಗಿದೆ ಎನ್ನಲಾಗಿದೆ.

ರೈತನನ್ನು ಛತ್ರಪಾಲ್ ಎಂದು ಗುರುತಿಸಲಾಗಿದ್ದು, ಶಾಸಕರನ್ನು ವೇದಿಕೆಯ ಮೇಲೆ ಹೊಡೆದ ನಂತರ ಪೊಲೀಸರು ಆತನನ್ನು ಕರೆದುಕೊಂಡು ಹೋಗುತ್ತಿರುವುದನ್ನು ವೀಡಿಯೋ ತುಣುಕಿನಲ್ಲಿ ನೋಡಬಹುದಾಗಿದೆ.

ಶಾಸಕ ಪಂಕಜ್ ಗುಪ್ತ ಈ ಕುರಿತಾಗಿ ಮಾತನಾಡಿ, ಆ ವ್ಯಕ್ತಿ ನನ್ನ ಚಾಚಾ ಮಾಡಿದಂತೆ ಪ್ರೀತಿಯಿಂದ ಕೆನ್ನೆ ತಟ್ಟಿದ್ದಾರೆ ಎಂದು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು