News Karnataka Kannada
Thursday, April 25 2024
ಉತ್ತರ ಪ್ರದೇಶ

‘ಶೇ 95ರಷ್ಟು ಜನರಿಗೆ ಬಿಜೆಪಿ ಅಗತ್ಯವಿಲ್ಲ : ಅಖಿಲೇಶ್‌ ಯಾದವ್ ತಿರುಗೇಟು

Akhilesh Yadav
Photo Credit :

ಲಖನೌ : ‘ಶೇ 95ರಷ್ಟು ಜನರಿಗೆ ಬಿಜೆಪಿ ಅಗತ್ಯವಿಲ್ಲ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಹೇಳಿದ್ದಾರೆ. ‘ಶೇ 95ರಷ್ಟು ಜನರಿಗೆ ಪೆಟ್ರೋಲ್‌, ಡೀಸೆಲ್‌ ಅಗತ್ಯವಿಲ್ಲ’ ಎಂಬ ಉತ್ತರ ಪ್ರದೇಶದ ಸಚಿವ ಉಪೇಂದ್ರ ತಿವಾರಿ ಅವರ ಹೇಳಿಕೆ ಅಖಿಲೇಶ್‌ ಹೀಗೆ ತಿರುಗೇಟು ನೀಡಿದ್ದಾರೆ.
ತಲಾವಾರು ಆದಾಯಕ್ಕೆ ಹೋಲಿಸಿದರೆ ಪೆಟ್ರೋಲ್‌, ಡೀಸೆಲ್ ಬೆಲೆ ಅಷ್ಟೇನೂ ಏರಿಕೆಯಾಗಿಲ್ಲ. ಶೇ 95ರಷ್ಟು ಜನರಿಗೆ ಪೆಟ್ರೋಲ್‌, ಡೀಸೆಲ್‌ ಅಗತ್ಯವೇ ಇಲ್ಲ ಎಂದು ತಿವಾರಿ ಗುರುವಾರ ಹೇಳಿದ್ದರು.

‘ಸಚಿವರ ಪ್ರಕಾರ, ಜನರಿಗೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಪರಿಣಾಮ ಬೀರದು. ಸಚಿವರಿಗೂ ಅದು ಬೇಕಿಲ್ಲ. ಏಕೆಂದರೆ ಜನ ಅವರನ್ನು ಅಧಿಕಾರದಿಂದ ಇಳಿಸುತ್ತಾರೆ. ಶೇ 95ರಷ್ಟು ಜನರಿಗೆ ಬಿಜೆಪಿಯೂ ಬೇಕಿಲ್ಲ’ ಎಂದು ಅಖಿಲೇಶ್‌ ಹೇಳಿದರು.

ಜೀಪ್‌ಗೆ ಡೀಸೆಲ್‌ ಅಗತ್ಯವಿದೆಯೇ ಎಂದು ಅವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಚಾಲನೆ ಮಾಡುತ್ತಿದ್ದ ಜೀಪ್‌ ಹರಿದು ಈಚೆಗೆ ಲಖಿಂಪುರ ಖೇರಿಯಲ್ಲಿ ನಾಲ್ವರು ರೈತರು ಮೃತಪಟ್ಟಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು