News Kannada
Tuesday, March 28 2023

ಉತ್ತರ ಪ್ರದೇಶ

ಮುಂದಿನ ನಮ್ಮ ಗುರಿ ಮಥುರಾ ಪಡೆಯುವುದು: ಮೋಹನ್‌ ಭಾಗವತ್‌

Photo Credit :

ಲಖನೌ: ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರ ಆಗಿರುವವರನ್ನು ಪುನಃ ಹಿಂದೂ ಧರ್ಮಕ್ಕೆ ಕರೆತರಲು (ಘರ್ ವಾಪಸಿ) ಹಿಂದೂಗಳು ಪ್ರತಿಜ್ಞೆ ಮಾಡಬೇಕು, ಜಾತೀಯತೆ ಮತ್ತು ಇತರ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘಚಾಲಕ ಮೋಹನ್‌ ಭಾಗವತ್‌ ಕರೆ ನೀಡಿದರು.

ಚಿತ್ರಕೂಟದಲ್ಲಿ ನಡೆಯುತ್ತಿರುವ ‘ಹಿಂದೂ ಮಹಾಕುಂಭ’ದಲ್ಲಿ ಅವರು ಬುಧವಾರ ಮಾತನಾಡಿದರು.ಮಹಾಕುಂಭದಲ್ಲಿ ಪಾಲ್ಗೊಂಡಿರುವ ಸ್ವಾಮೀಜಿಗಳು ಮತ್ತು ದಾರ್ಶನಿಕರು ‘ಲವ್‌ ಜಿಹಾದ್‌, ಮತಾಂತರ’ಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿ, ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ರಕ್ಷಿಸುವಂತೆ ಅವರು ಆಗ್ರಹಿಸಿದರು.

ಸ್ವಾಮೀಜಿಗಳನ್ನು ಉದ್ದೇಶಿಸಿ ಮಾತನಾಡಿದ ಭಾಗವತ್‌, ಹಿಂದೂಗಳಲ್ಲಿ ಏಕತೆ ತರಬೇಕಾದ ಅಗತ್ಯವಿದ್ದು,’ಮತಾಂತರ ಆಗಿರುವವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರಲು ಎಲ್ಲರೂ ಪ್ರತಿಜ್ಞೆ ಮಾಡಬೇಕಿದೆ. ಜತೆಗೆ ಹಿಂದೂಗಳು ಮತಾಂತರ ಆಗದಂತೆಯೂ ನೋಡಿಕೊಳ್ಳಬೇಕಿದೆ. ಹಿಂದೂ ಸಹೋದರಿಯರ ಘನತೆಯನ್ನು ಕಾಪಾಡುವ ಪ್ರತಿಜ್ಞೆಯನ್ನು ನಾವೆಲ್ಲರೂ ಮಾಡಬೇಕಿದೆ’ ಎಂದರು.

ಮಥುರಾದ ಶ್ರೀಕೃಷ್ಣ ಜನ್ಮಭೂಮಿಯನ್ನು ಹಿಂದೂಗಳಿಗೆ ಮರಳಿ ನೀಡಬೇಕು ಎಂದು ಆಗ್ರಹಿಸಿದ ರಾಮಭದ್ರಾಚಾರ್ಯರು, ‘ನಾವು ಈಗಾಗಲೇ ಎ (ಅಯೋಧ್ಯೆ) ಮತ್ತು ಕೆ (ಕಾಶಿ) ಹೊಂದಿದ್ದೇವೆ. ಈಗ ನಮಗೆ ಎಂ (ಮಥುರಾ) ಬೇಕು’ ಎಂದು ಅವರು ಹೇಳಿದರು

See also  ಆರ್‌ಎಸ್‌ಎಸ್ ನಿಂದ ಸಂಸ್ಕಾರ: ಸಚಿವ ಕೆ.ಎಸ್.ಈಶ್ವರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು