News Kannada
Friday, March 24 2023

ಉತ್ತರ ಪ್ರದೇಶ

ಮಗು ದತ್ತು ಪಡೆಯಲು ವಿವಾಹ ಪ್ರಮಾಣ ಪತ್ರದ ಅಗತ್ಯ ಇಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು

Hassan: 'Legal awareness among public will help to have peace in society'
Photo Credit : IANS

ಅಲಹಾಬಾದ್ ಹೈಕೋರ್ಟ್, ಮಗುವನ್ನು ದತ್ತು ತೆಗೆದುಕೊಳ್ಳಲು ಮದುವೆ ಪ್ರಮಾಣ ಪತ್ರ ದ ಅಗತ್ಯತೆ ಇಲ್ಲ ಎಂದು ​ ಹೇಳಿದೆ. ಹಿಂದೂ ದತ್ತು ಮತ್ತು ನಿರ್ವಹಣೆ ಕಾಯಿದೆ 1956 ರ ಅಡಿಯಲ್ಲಿ ಒಂಟಿ ಪೋಷಕರೂ  ಕೂಡ ಮಗುವನ್ನು ದತ್ತು ಪಡೆಯಬಹುದು ಎಂದು ತಿಳಿಸಿದೆ.

ಮಂಗಳಮುಖಿಯೊಬ್ಬರು ಮಗುವನ್ನು ದತ್ತು ತೆಗೆದುಕೊಳ್ಳುವ ಸಂಬಂಧ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಾ. ಕೌಶಲ್​ ಜಯೇಂದ್ರ ಠಾಕೆ ಮತ್ತು ನ್ಯಾ. ವಿವೇಕ್​ ವರ್ಮಾರ ಪೀಠ ಈ ತೀರ್ಪು ನೀಡಿದೆ. ಮಗುವನ್ನು ದತ್ತು ತೆಗೆದುಕೊಳ್ಳಲು ಮದುವೆ ಆಗಿರಲೇ ಬೇಕು ಎಂದೆಲ್ಲ ಏನೂ ಇಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

ಮಗುವನ್ನು ದತ್ತು ತೆಗೆದುಕೊಳ್ಳುವ ಸಂಬಂಧ ಅರ್ಜಿ ಸಲ್ಲಿಸಿದ್ದ ಮಂಗಳಮುಖಿಯ ಹೆಸರು ರೀನಾ. ವಾರಣಾಸಿಯ ಅರ್ದಾಲಿ ಬಜಾರ್‌ನ ಮಹಾಬೀರ್ ಮಂದಿರದಲ್ಲಿ 2000ನೇ ಇಸ್ವಿಯ ಡಿಸೆಂಬರ್ 16 ರಂದು ವ್ಯಕ್ತಿಯೊಬ್ಬರನ್ನು ವಿವಾಹವಾದರು. ನಂತರ ದಂಪತಿ ಮಗುವೊಂದನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದರು. ಮಗುವನ್ನು ದತ್ತು ಪಡೆಯುವ ಪ್ರಕ್ರಿಯೆ ಶುರು ಮಾಡಿದ್ದರು. ಆದರೆ ದತ್ತು ತೆಗೆದುಕೊಳ್ಳಬೇಕು ಎಂದರೆ, ಹಿಂದು ವಿವಾಹ ಕಾಯ್ದೆಯಡಿ ವಿವಾಹ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಹೇಳಲಾಯಿತು.

ಹೀಗಾಗಿ 2021ರಲ್ಲಿ ದಂಪತಿ ವಾರಾಣಸಿಯ ಸಬ್​ ರಿಜಿಸ್ಟ್ರಾರ್​ ಕಚೇರಿಗೆ ಆನ್​​ಲೈನ್​​ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ವಿವಾಹವನ್ನು ನೋಂದಣಿ ಮಾಡಿ, ಅದರ ಪ್ರಮಾಣ ಪತ್ರ ನೀಡುವಂತೆ ಕೋರಿದ್ದರು. ರೀನಾ ತೃತೀಯಲಿಂಗಿ ಆಗಿದ್ದರಿಂದ ಅವರ ವಿವಾಹವನ್ನು ನೋಂದಾವಣೆ ಮಾಡಲು ಸಾಧ್ಯವಿಲ್ಲ. ವಿವಾಹ ಸರ್ಟಿಫಿಕೇಟ್​ ನೀಡಲು ಕಾನೂನು ಪ್ರಕಾರ ಸಾಧ್ಯವಿಲ್ಲ ಎಂದು ಹೇಳಲಾಗಿತ್ತು.

ಅದಾದ ನಂತರ ದಂಪತಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ತಮಗೆ ಮಗುವನ್ನು ದತ್ತು ತೆಗೆದುಕೊಳ್ಳಬೇಕಾಗಿದೆ. ಹೀಗಾಗಿ ಅದಕ್ಕೆ ಸಂಬಂಧಪಟ್ಟಂತೆ ವಿವಾಹ​ ಸರ್ಟಿಫಿಕೇಟ್​ ಕೊಡುವಂತೆ ವಾರಾಣಸಿ ಸಬ್​ ರಿಜಿಸ್ಟ್ರಾರ್​ ಕಚೇರಿಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದರು.

ಈಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ಹಿಂದು ದತ್ತು ಮತ್ತು ನಿರ್ವಹಣಾ ಕಾಯ್ದೆ 1956ರ ಸೆಕ್ಷನ್​ 7 (ದತ್ತು ತೆಗೆದುಕೊಳ್ಳಲು ಹಿಂದು ಪುರುಷನ ಸಾಮರ್ಥ್ಯ) ಮತ್ತು ಸೆಕ್ಷನ್​ 8 (ದತ್ತು ಸ್ವೀಕರಿಸಲು ಹಿಂದೂ ಮಹಿಳೆಯ ಸಾಮರ್ಥ್ಯ)ಗಳಡಿ ಮಕ್ಕಳನ್ನು ದತ್ತು ಪಡೆಯಲು ವಿವಾಹ ಪ್ರಮಾಣ ಪತ್ರದ ಅಗತ್ಯತೆ ಇಲ್ಲ ಎಂದು ತೀರ್ಪು ನೀಡಿದೆ.

ಇನ್ನು ಕರ್ನಾಟಕದಲ್ಲಿ 2014ರಲ್ಲಿ ಕೇವಲ 77 ಮಕ್ಕಳನ್ನು ದತ್ತು ಪಡೆಯಲಾಗಿತ್ತು. ಆದರೆ, ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ 2005ರಲ್ಲಿ ತಂದ ನೂತನ ದತ್ತು ಮಾರ್ಗಸೂಚಿ ಕರ್ನಾಟಕದಲ್ಲಿ ಮಕ್ಕಳ ಭಾಗ್ಯದಿಂದ ವಂಚಿತರಾಗಿದ್ದ ದಂಪತಿಗಳಿಗೆ ವರದಾನವಾಯಿತು. ಮಕ್ಕಳನ್ನು ದತ್ತು ಪಡೆಯಲು ಕೆಲವು ಸಾಮಾನ್ಯ ದಾಖಲೆಗಳು ಮತ್ತು ನಿಯಮಗಳ ಪಾಲನೆ ಅಗತ್ಯವಾಗಿದೆ. ಮಕ್ಕಳನ್ನು ದತ್ತು ಪಡೆಯುವುದರಿಂದ ಅನಾಥ ಮಕ್ಕಳ ಪಾಲನೆಗೆ ಸಹಕಾರಿ.

ಮಕ್ಕಳನ್ನು ದತ್ತು ತೆಗದುಕೊಳ್ಳುವುದು ಜನಸಂಖ್ಯೆ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ಜೊತೆಗೆ ಅನಾಥ ಮಕ್ಕಳ ಉತ್ತಮ ಭವಿಷ್ಯ ಮತ್ತು ಮಕ್ಕಳ ಅನಾಥ ಭಾವ, ತಂದೆ ತಾಯಿ ಇಲ್ಲ ಎನ್ನುವ ನೋವು ಕಡಿಮೆಯಾಗುತ್ತದೆ. ಮಕ್ಕಳನ್ನು ದತ್ತು ಪಡೆಯುವುದು ಹೆಣ್ಣುಮಕ್ಕಳಲ್ಲಿನ ಬಂಜೆತನವನ್ನು ಕಡಿಮೆ ಮಾಡುತ್ತದೆ. ಬದಲಾದ ಆಹಾರ ಪದ್ಧತಿ ಇನ್ನಿತರೆ ಕಾರ್ಯಗಳಿಂದಾಗಿ ಕೂಡ ಬಂಜೆತನದ ಸಮಸ್ಯೆ ಎದುರಾಗಿದೆ. ಮಕ್ಕಳನ್ನು ಮಾಡಿಕೊಳ್ಳುವುದರಲ್ಲಿ ವಿಚ್ಛೇದನ, ವಿವಾಹ ವಿಳಂಬ, ನಾನಾ ಅಪಘಾತದಲ್ಲಿ ಮಕ್ಕಳನ್ನು ಕಳೆದುಕೊಂಡವರು, ಸಮಯ ಮುಂದೂಡಿಕೆ, ಆಧುನಿಕ ಜೀವನ ಶೈಲಿಯೂ ಬಂಜೆತನ ಸಮಸ್ಯೆಗೆ ಕಾರಣವಾಗಿದೆ.

See also  ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು