News Kannada
Tuesday, October 03 2023
ಉತ್ತರ ಪ್ರದೇಶ

ಲಕ್ನೋ: ಬಾಂಡಾ ದೋಣಿ ದುರಂತ, ಸಂತ್ರಸ್ತರ ಕುಟುಂಬಕ್ಕೆ ಆರ್ಥಿಕ ನೆರವು ಘೋಷಿಸಿದ ಯೋಗಿ

Uttar Pradesh Chief Minister Yogi Adityanath
Photo Credit : Wikimedia

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಾಂಡಾ ಬೋಟ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಇಬ್ಬರು ಸಚಿವರಾದ ರಾಕೇಶ್ ಸಚನ್ ಮತ್ತು ರಾಮ್ಕೇಶ್ ನಿಶಾದ್ ಅವರು ಸ್ಥಳಕ್ಕೆ ಆಗಮಿಸುವಂತೆ ಮತ್ತು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುರಾಗ್ ಪಟೇಲ್ ಮಾತನಾಡಿ, ಈವರೆಗೆ 13 ಜನರನ್ನು ರಕ್ಷಿಸಲಾಗಿದ್ದು, 17 ಜನರು ಇನ್ನೂ ಕಾಣೆಯಾಗಿದ್ದಾರೆ.

ಯಮುನಾ ನದಿಯಲ್ಲಿ ಸುಮಾರು 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಬಲವಾದ ಗಾಳಿಯಿಂದಾಗಿ ಸಮತೋಲನವನ್ನು ಕಳೆದುಕೊಂಡು ಮುಳುಗಿತು ಎಂದು ಬಾಂಡಾ ಎಸ್ಪಿ ಅಭಿನಂದನ್ ತಿಳಿಸಿದ್ದಾರೆ.

ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ನಾವಿಕನನ್ನು ಬಂಧಿಸಲಾಗಿದೆ. ಕಾಣೆಯಾದ ಎಲ್ಲಾ ಜನರನ್ನು ಪತ್ತೆಹಚ್ಚುವವರೆಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ಹೇಳಿದರು.

See also  ಉತ್ತರ ಪ್ರದೇಶ: ನೂರು ದಿನಗಳ ಆಡಳಿತ ಪೂರೈಸಿ, ವರದಿಯೊಂದನ್ನು ಬಿಡುಗಡೆ ಗೊಳಿಸಿದ ಸಿಎಂ ಯೋಗಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು