ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ವಿದೇಶಿ ದೇಣಿಗೆ ಪಡೆಯಲು ಕೇಂದ್ರ ಗೃಹಸಚಿವಾಲಯ ಒಪ್ಪಿಗೆ ನೀಡುವ ನಿರೀಕ್ಷೆಯಿದೆ. ಅನಿವಾಸಿ ಭಾರತೀಯರು ಮತ್ತು ವಿದೇಶಿಗರು ದೇವಸ್ಥಾನಕ್ಕೆ ತಮ್ಮ ಕೊಡುಗೆಯನ್ನು ನೀಡಲು ಬಯಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಗೃಹಸಚಿವಾಲಯ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಟ್ರಸ್ಟ್ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್ಸಿಆರ್ಎ) ನೋಂದಣಿಯನ್ನು ಇನ್ನೂ ಪಡೆಯದ ಕಾರಣ ದೇಶದ ಹೊರಗಿನಿಂದ ದೇಣಿಗೆಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ.
ಅಯೋಧ್ಯೆಯಲ್ಲಿರುವ ಟ್ರಸ್ಟ್ ಕಚೇರಿಯ ಉಸ್ತುವಾರಿ ಪ್ರಕಾಶ್ ಕುಮಾರ್ ಗುಪ್ತಾ ಮಾತನಾಡಿ ವಿದೇಶಿ ದೇಣಿಗೆ ಪಡೆಯಲು ಎಲ್ಲ ಔಪಚಾರಿಕ ಕ್ರಮಗಳು ನಡೆಯುತ್ತಿವೆ. ಅಗತ್ಯ ದಾಖಲಾತಿ ತಯಾರಿ ಮಾಡಲಾಗುತ್ತಿದೆ. ನವೆಂಬರ್ನಲ್ಲಿ ಗೃಹ ಇಲಾಖೆ ಅನುಮತಿ ನೀಡುವ ಭರವಸೆ ಇದೆ ಎಂದು ಹೇಳಿದ್ದಾರೆ.
ಆದರೆ ವಿದೇಶದಲ್ಲಿ ನೆಲೆಸಿರುವ ಭಾರತೀಯರು ಪ್ರತಿದಿನ ವಿದೇಶಿ ಹಣವನ್ನು ವರ್ಗಾಯಿಸಲು ಅನುಸರಿಸಬೇಕಾದ ಪ್ರಕ್ರಿಯೆಯ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.