News Karnataka Kannada
Friday, April 26 2024
ಮನರಂಜನೆ

ಕೇರಳ ಸ್ಟೋರಿ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ

Tax exemption in Uttar Pradesh for the film Kerala Story
Photo Credit :

ಲಕ್ನೋ: ಉತ್ತರ ಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಮಂಗಳವಾರ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಯುಪಿ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, “ದಿ ಕೇರಳ ಸ್ಟೋರಿ’ ಅನ್ನು ತೆರಿಗೆ ಮುಕ್ತಗೊಳಿಸುವುದು ಉತ್ತಮ ನಿರ್ಧಾರವಾಗಿದೆ. ಉತ್ತರ ಪ್ರದೇಶದ ಜನರು ಈ ಚಿತ್ರವನ್ನು ನೋಡಬೇಕು ಮತ್ತು ನಮ್ಮ ಸಹೋದರಿಯರು ಹೇಗೆ ತೊಂದರೆ ಅನುಭವಿಸಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ನಾವು ಕೂಡ ಹೋಗಿ ಚಿತ್ರ ನೋಡುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಪಶ್ಚಿಮ ಬಂಗಾಳದ ಜನರು ಚಿತ್ರ ಮೇಲಿನ ನಿಷೇಧವನ್ನು ಒಪ್ಪಿಕೊಳ್ಳಲಾರರು ಎಂದು ಹೇಳಿದ್ದಾರೆ.

ಸುದೀಪ್ತೋ ಸೇನ್ ಅವರ ನಿರ್ದೇಶನದ ‘ದಿ ಕೇರಳ ಸ್ಟೋರಿ’, ಇಸ್ಲಾಂಗೆ ಮತಾಂತರಗೊಂಡು ಭಯೋತ್ಪಾದಕ ಸಂಘಟನೆಗೆ ಸೇರಿ ಅನುಭವಿಸುವ ತೊಂದರೆಯ ಕುರಿತು ಚಿತ್ರ ಕಥಾಹಂದರ ಹೊಂದಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು “ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಬೆದರಿಕೆ” ಯನ್ನು ಉಲ್ಲೇಖಿಸಿ ಚಲನಚಿತ್ರವನ್ನು ನಿಷೇಧಿಸಲು ನಿರ್ಧರಿಸಿದ್ದಾರೆ. ಮಧ್ಯಪ್ರದೇಶದ ಈಗಾಗಲೇ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು