News Kannada
Thursday, September 21 2023
ಉತ್ತರಖಂಡ

ಕೇದಾರನಾಥದಲ್ಲಿ ಕಸ ಶೇಖರಣೆಯಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ

KEDAR
Photo Credit :

ಕೇದಾರನಾಥ: ಚಾರ್‌ಧಾಮ್ ಯಾತ್ರೆಯ ಅಂಗವಾಗಿ ಕೇದಾರನಾಥದಲ್ಲಿ ಕಸ ಶೇಖರಣೆಯಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಪವಿತ್ರ ಯಾತ್ರಾಸ್ಥಳದಲ್ಲಿ ಹೀಗೆ ಕಸ ಹಾಕುವುದು ಅನುಚಿತ ಎಂದರು.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ‘ಮನ್ ಕಿ ಬಾತ್’ ಅಂಗವಾಗಿ ರೇಡಿಯೊದಲ್ಲಿ ಮಾತನಾಡಿ, ಉತ್ತರಾಖಂಡದ ಕೇದಾರನಾಥ ಪ್ರವಾಸದುದ್ದಕ್ಕೂ ತ್ಯಾಜ್ಯ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. “ಪ್ರಸ್ತುತ ದೇಶದಲ್ಲಿ ಪವಿತ್ರ ಚಾರ್‌ಧಾಮ್ ಯಾತ್ರೆ ನಡೆಯುತ್ತಿದೆ. ಈ ಯಾತ್ರೆಯ ಭಾಗವಾಗಿ ಪ್ರತಿದಿನ ಸಾವಿರಾರು ಭಕ್ತರು ಕೇದಾರನಾಥಕ್ಕೆ ಭೇಟಿ ನೀಡಿ ತಮ್ಮ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ.

ಆದರೆ, ಅನೇಕ ಪ್ರಯಾಣಿಕರು ದಾರಿಯುದ್ದಕ್ಕೂ ತ್ಯಾಜ್ಯ ಮತ್ತು ಕಸವನ್ನು ಎಲ್ಲೆಂದರಲ್ಲಿ ಹಾಕಿ ಗಲೀಜು ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದು, ಅಭಾಸ ವ್ಯಕ್ತವಾಗುತ್ತಿದೆ.

ಆಧ್ಯಾತ್ಮಿಕ ಸ್ಥಳಗಳಲ್ಲಿ ಇಂತಹ ಅಧ್ವಾನಗಳನ್ನು ನೋಡುವುದು ಸರಿಯಲ್ಲ. ಕೆಲವು ಭಕ್ತರು ಈ ಕಸದ ಜಾಗಗಳನ್ನು ಸ್ವಚ್ಛಗೊಳಿಸುತ್ತಿದ್ದರೆ, ಇನ್ನೂ ಕೆಲ ಭಕ್ತರು ತಾವು ಇರುವ ಸ್ಥಳ ಸ್ವಚ್ಛವಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ತಿಳಿಸಿದರು.

See also  ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು