News Kannada
Wednesday, November 29 2023
ವಿದೇಶ

ರಾಜತಾಂತ್ರಿಕರ ಸಂಖ್ಯೆ ಕಡಿಮೆ ಮಾಡಿ: ಕೆನಡಾಕ್ಕೆ ಖಡಕ್‌ ಸೂಚನೆ

India Wants Reduction In Canada Diplomats
Photo Credit : News Kannada

ನವದೆಹಲಿ: ಭಾರತದ ಆಂತರಿಕ ವ್ಯವಹಾರಗಳಲ್ಲಿ ಕೆನಡಾದ ಹಸ್ತಕ್ಷೇಪ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ರಾಜತಾಂತ್ರಿಕರ ಉಪಸ್ಥಿತಿಯನ್ನು ಕಡಿಮೆ ಮಾಡುವಂತೆ ಅಲ್ಲಿನ ಸರ್ಕಾರಕ್ಕೆ
ನವದೆಹಲಿ ಸೂಚಿಸಿದೆ. ಗುರುವಾರ ಮುಂಜಾನೆ, ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿತು. ಇದರ ಮುಂದುವರಿದ ಭಾಗವಾಗಿ ಈ ಬೆಳವಣಿಗೆ ನಡೆದಿದೆ.

ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕರ ಉಪಸ್ಥಿತಿಗಿಂತ ಹೆಚ್ಚಿನ ಸಂಖ್ಯೆ ಅಧಿಕಾರಿಗಳು ಭಾರತದಲ್ಲಿ ಇದ್ದಾರೆ. ಈ ಸಂಖ್ಯೆಯನ್ನು ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ರಾಜತಾಂತ್ರಿಕ ಉಪಸ್ಥಿತಿಯಲ್ಲಿ ಸಮಾನತೆ ಇರಬೇಕು ಎಂದು ನಾವು ಕೆನಡಾದ ಸರ್ಕಾರಕ್ಕೆ ತಿಳಿಸಿದ್ದೇವೆ. ಪ್ರಸ್ತುತ ಅವರ ಸಂಖ್ಯೆಯು ತುಂಬಾ ಹೆಚ್ಚಾಗಿದೆ ಎಂದು ಬಾಗ್ಚಿ ಹೇಳಿದ್ದಾರೆ.
ಸದ್ಯಕ್ಕೆ, ಕೆನಡಾದಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಕೆನಡಾದ ಸರ್ಕಾರದ ನಿಷ್ಕ್ರಿಯತೆಯಿಂದಾಗಿ ನಾವು ವೀಸಾ ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ ಎಂದು ಬಾಗ್ಚಿ ಹೇಳಿದ್ದಾರೆ.
ರಾಜಕೀಯ ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರ”ದಿಂದಾಗಿ ಕೆನಡಾದಲ್ಲಿ ತನ್ನ ನಾಗರಿಕರ ಸುರಕ್ಷತೆಗೆ ಅಪಾಯವಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಈ ಹಿಂದೆ ಹೇಳಿತ್ತು.

See also  ವಿಶ್ವಾಸಮತ ಗೆದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು