ವಾಷಿಂಗ್ಟನ್: ಇದು ಯುದ್ದದ ಯುಗವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪರಸ್ಪರ ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ರಷ್ಯಾ – ಉಕ್ರೇನ್ ಯುದ್ದವನ್ನು ಕೊನೆಗಾಣಿಸಬೇಕು ಎಂದು ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ನೀಡಿದರು.
ಹಿರೋಷಿಮಾದಲ್ಲಿ ಕ್ವಾಡ್ ದೇಶಗಳಾದ ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಸಭೆಯಲ್ಲಿ ಅವರು ಮಾತನಾಡಿದರು. ಪುಟಿನ್ ಅವರ ಹೆಸರನ್ನು ಉಲ್ಲೇಖಿಸದೇ ಪರಮಾಣು ಶಸ್ತ್ರಾಸ್ತ್ರ ಬಳಕೆ ಬೆದರಿಕೆಯನ್ನು ಅವರು ಖಂಡಿಸಿದರು.
ಅಲ್ಲದೆ ಭಯೋತ್ಪಾದನೆ ಮತ್ತು ಉಗ್ರವಾದವನ್ನು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಖಂಡಿಸಿದರು. 26/11 ಮುಂಬೈ ಭಯೋತ್ಪಾದಕ ದಾಳಿಗೆ ಕಾರಣರಾದವರನ್ನು ಶಿಕ್ಷಿಸುವಂತೆ ಕರೆ ನೀಡಿದರು. ಮ್ಯಾನ್ಮಾರ್ನಲ್ಲಿ “ಹದಗೆಡುತ್ತಿರುವ” ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.