News Karnataka Kannada
Saturday, April 27 2024
ವಿದೇಶ

ಮುಂದಿನ ವಾರದ ಯುದ್ಧ ನಿರ್ಣಾಯಕ ಮತ್ತು ಕಠಿಣವಾಗಿರಲಿದೆ : ಝೆಲೆನ್ಸ್ಕಿ

Ukrain President
Photo Credit :

ಎಲ್ವಿವ್ :ಮುಂದಿನ ವಾರದ ಯುದ್ಧ ನಿರ್ಣಾಯಕ ಮತ್ತು ಮತ್ತಷ್ಟು ಕಠಿಣವಾಗಿರಲಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ಉಕ್ರೇನ್ ಪ್ರಜೆಗಳು ಮತ್ತು ಸೇನೆಯನ್ನು ಉದ್ದೇಶಿಸಿ ಮಾತನಾಡಿರುವ ಪೂರ್ವದಲ್ಲಿ ಬಿಡಾರ ಹೂಡಿರುವ ರಷ್ಯಾದ ಪಡೆಗಳು ಇನ್ನೂ ದೊಡ್ಡ ಪ್ರಮಾಣದ ಕಾರ್ಯಾಚರಣೆಗೆ ಇಳಿಯಲಿವೆ.

ಯುದ್ಧ ಅಪರಾಧಗಳ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ರಷ್ಯಾ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.ಜನರು ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಲು, ಕ್ಷಮೆಯಾಚಿಸಲು, ವಾಸ್ತವಕ್ಕೆ ಹೊಂದಿಕೊಳ್ಳಲು ಮತ್ತು ಕಲಿಯಲು ಧೈರ್ಯವಿಲ್ಲದಿದ್ದಾಗ ರಾಕ್ಷಸರಾಗುತ್ತಾರೆ. ಜಗತ್ತು ಅದನ್ನು ನಿರ್ಲಕ್ಷಿಸಿದಾಗ ರಾಕ್ಷಸರು ತಮಗೆ ಜಗತ್ತು ಹೊಂದಿಕೊಳ್ಳಬೇಕು ಎಂದು ಬಯಸುತ್ತಾರೆ.

ತಪ್ಪು ಮಾಡುತ್ತಿರುವ ರಷ್ಯಾ ಅಧ್ಯಕ್ಷರು ಎಲ್ಲವನ್ನೂ ಒಪ್ಪಿಕೊಳ್ಳಬೇಕಾದ ದಿನ ಬರುತ್ತದೆ, ಸತ್ಯವನ್ನು ಒಪ್ಪಿಕೊಳ್ಳಲೇ ಬೇಕಾಗುತ್ತದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಉಕ್ರೇನ್‍ಗೆ ಹೆಚ್ಚಿನ ನೆರವು ನೀಡುವಂತೆ ಜರ್ಮನಿ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಮತ್ತೊಮ್ಮೆ ಕರೆ ನೀಡಿದ ಝೆಲೆನ್ಸ್ಕಿ, ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗಿನ ಮಾತುಕತೆಯ ಸಮಯದಲ್ಲಿ ರಷ್ಯಾ ವಿರುದ್ಧ ನಿರ್ಬಂಧಗಳನ್ನು ಮತ್ತಷ್ಟು ಬಲಪಡಿಸುವುದು ಮತ್ತು ಯುದ್ಧ ನಿಲ್ಲಿಸುವಂತೆ ರಷ್ಯಾವನ್ನು ಒತ್ತಾಯಿಸುವ ರೀತಿಯ ಬಗ್ಗೆ ಚರ್ಚಿಸಿರುವುದಾಗಿ ಝೆಲೆನ್ಸ್ಕಿ ಹೇಳಿದ್ದಾರೆ.

ಜರ್ಮನ್ ಇತ್ತೀಚೆಗೆ ಉಕ್ರೇನ್ ಪರವಾಗಿ ಬದಲಾಗಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತಿದೆ. ನಾನು ಅದನ್ನು ಸಂಪೂರ್ಣವಾಗಿ ತಾರ್ಕಿಕವೆಂದು ಪರಿಗಣಿಸುತ್ತೇನೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು