News Karnataka Kannada
Saturday, April 20 2024
Cricket
ವಿದೇಶ

ಶ್ರೀಲಂಕಾ ಹಿಂಸಾಚಾರ : ಕಂಡಲ್ಲಿ ಗುಂಡು ಆದೇಶ

Untitled 178
Photo Credit :

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಬೀದಿಗಿಳಿದಿರುವ ಜನ ಶ್ರೀಲಂಕಾದಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ, ಸಾರ್ವಜನಿಕ ಆಸ್ತಿ ಲೂಟಿ ಮತ್ತು ಹಾನಿ ಉಂಟು ಮಾಡುವವರಿಗೆ ಕಂಡಲ್ಲಿ ಗುಂಡಿಡಲು ಅಲ್ಲಿನ ರಕ್ಷಣಾ ಸಚಿವಾಲಯ ಆದೇಶಿಸಿದೆ.

ಪ್ರತಿಭಟನಾಕಾರರು ಆಡಳಿತ ಪಕ್ಷದ ರಾಜಕಾರಣಿಗಳ ಮನೆಗಳನ್ನು ಟಾರ್ಗೆಟ್ ಮಾಡಿದ ಬಳಿಕ ಈ ಆದೇಶ ಮಾಡಲಾಗಿದೆ.

‘ಸಾರ್ವಜನಿಕರ ಆಸ್ತಿ ಲೂಟಿ ಮಾಡುವವರು ಮತ್ತು ಜೀವಕ್ಕೆ ತೊಂದರೆ ಮಾಡುವವರ ವಿರುದ್ಧ ಕಂಡಲ್ಲಿ ಗುಂಡಿಕ್ಕಲು ಭದ್ರತಾ ಪಡೆಗಳಿಗೆ ಆದೇಶಿಸಲಾಗಿದೆ’ ಎಂದು ಸಚಿವಾಲಯ ಹೇಳಿದೆ.

ನಿನ್ನೆ ನಡೆದ ತೀವ್ರ ಹಿಂಸಾಚಾರದ ನಂತರ ರಾಜಧಾನಿ ಕೊಲಂಬೊ ಮತ್ತು ಇತರೆಡೆ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ಸಾವಿರಾರು ಸಂಖ್ಯೆಯ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸೋಮವಾರ ರಾತ್ರಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಎಂಟು ಮಂದಿ ಸಾವಿಗೀಡಾಗಿದ್ದಾರೆ. 65 ಮನೆಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಲವತ್ತೊಂದು ಮನೆಗಳು ಸುಟ್ಟು ಕರಕಲಾಗಿವೆ.

ನೂರಾರು ದ್ವಿಚಕ್ರವಾಹನಗಳ ಜೊತೆಗೆ 88 ಕಾರುಗಳು ಮತ್ತು ಬಸ್ಸುಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕೃತ ಅಂಕಿಅಂಶಗಳಿಂದ ತಿಳಿದುಬಂದಿದೆ.

ಶುಕ್ರವಾರದಿಂದ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಶಂಕಿತರನ್ನು ಬಂಧಿಸಲು ಮತ್ತು ವಿಚಾರಣೆಗೊಳಪಡಿಸಲು ಮಿಲಿಟರಿಗೆ ವ್ಯಾಪಕ ಅಧಿಕಾರ ನೀಡಲಾಗಿದೆ.

ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆಗೆ ಒತ್ತಾಯಿಸಿ ಅವರ ಮನೆ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸರ್ಕಾರ ಪರ ಹೋರಾಟಗಾರರು ದಾಳಿ ನಡೆಸಿದ ಬಳಿಕ ಎರಡು ದಿನಗಳ ಕಾಲ ದೇಶದಾದ್ಯಂತ ಕರ್ಫ್ಯೂ ವಿಧಿಸಲಾಗಿದೆ.

ಸೋಮವಾರ ಸರ್ಕಾರ ಬೆಂಬಲಿತ ಹೋರಾಟಗಾರರು ನಡೆಸಿರುವ ದಾಳಿಯಲ್ಲಿ 219 ಮಂದಿ ಗಾಯಗೊಂಡಿದ್ದಾರೆ ಎಂದು ರಾಜಧಾನಿಯ ಪ್ರಮುಖ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಶಾಂತಿಯುತ ಪ್ರತಿಭಟನಾಕಾರರ ಮೇಲೆ ನಡೆದ ದಾಳಿಯನ್ನು ತಡೆಯಲು ವಿಫಲವಾಗಿದ್ದಾರೆ ಎಂದು ಆರೋಪಿಸಿ ಉದ್ರಿಕ್ತ ಜನರು, ಮಂಗಳವಾರ ಮಧ್ಯಾಹ್ನ, ಕೊಲಂಬೊದಲ್ಲಿ ಉನ್ನತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಅವರ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು