News Kannada
Wednesday, March 29 2023

ವಿದೇಶ

ಶ್ರೀಲಂಕಾದಲ್ಲಿ ಭುಗಿಲೆದ್ದ ಆಹಾರ ಬಿಕ್ಕಟ್ಟು

Photo Credit :

ಕೊಲಂಬೊ : ಶ್ರೀಲಂಕಾದ ಖಾಸಗಿ ಬ್ಯಾಂಕುಗಳಲ್ಲಿ ವಿದೇಶಿ ವಿನಿಮಯ ಖಾಲಿಯಾದ ಪರಿಣಾಮ ಆಮದು ಪ್ರಕ್ರಿಯೆಗೆ ತಡೆ ಬಿದ್ದಿದ್ದು ಅದರ ಬೆನ್ನಲ್ಲೇ ಶ್ರೀಲಂಕಾ ಆಹಾರ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ.

ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಆಹಾರ ಅಭದ್ರತೆ ತೋರಿರುವುದರಿಂದ ಸಕ್ಕರೆ, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ದಾಸ್ತಾನಿನ ವಿರುದ್ಧ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಹಿತಿ ನೀಡಿದ್ದಾರೆ.

ಇದೇ ಸಂಬಂಧ ಅಕ್ಕಿ ಹಾಗೂ ಅಗತ್ಯ ವಸ್ತುಗಳ ಪೂರೈಕೆ ಪ್ರಕ್ರಿಯೆ ನಿರ್ವಹಣೆಗಾಗಿ ಉನ್ನತ ಸೇನಾಧಿಕಾರಿಯನ್ನು ರಾಜಪಕ್ಸ ಅವರು ನೇಮಕ ಮಾಡಿದ್ದಾರೆ.

ಶ್ರೀಲಂಕಾದಲ್ಲಿ ಅಕ್ಕಿ, ಆಲೂಗಡ್ಡೆ ಸೇರಿದಂತೆ ಹಲವು ದಿನಸಿ ಸಾಮಗ್ರಿ ಬೆಲೆ ಗಗನಕ್ಕೇರುತ್ತಲೇ ಇದೆ. ಅಲ್ಲದೆ ಹಾಲಿನ ಪುಡಿ, ಸೀಮೆ ಎಣ್ಣೆ, ಅಡುಗೆ ಅನಿಲ ಖರೀದಿಗೆ ಗ್ರಾಹಕರು ಅಂಗಡಿ ಮುಂದೆ ಸರದಿ ನಿಲ್ಲುತ್ತಿದ್ದಾರೆ.

2020ರಲ್ಲಿ ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಂಠಿತಗೊಂಡಿತ್ತು. ಅಲ್ಲದೆ ವಿದೇಶಿ ವಿನಿಮಯ ಉಳಿಸುವ ಉದ್ದೇಶದಿಂದ ಹಲವು ಅಗತ್ಯ ವಸ್ತುಗಳ ಆಮದಿನ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇವೆಲ್ಲದರಿಂದಾಗಿ ಆಹಾರ ಅಭದ್ರತೆ ತಲೆದೋರಿದೆ ಎಂದು ತಜ್ನರು ಅಭಿಪ್ರಾಯಪಟ್ಟಿದ್ದಾರೆ.

ಇಂಧನ ಸಚಿವ ಉದಯ ಗಮನ್ ಪಿಲ ಅವರು ಇಂಧನವನ್ನು ಎಚ್ಚರಿಕೆಯಿಂದ ಬಳಸುವಂತೆ ನಾಗರಿಕರಿಗೆ ಮನವಿ ಮಾಡಿದ್ದರು ಎನ್ನುವುದು ಗಮನಾರ್ಹ. ಇಂಧನ ಬಳಕೆ ಕಡಿಮೆಯಾಗದಿದ್ದಲ್ಲಿ ಈ ವರ್ಷಾಂತ್ಯ ಶ್ರೀಲಂಕಾ ಸರ್ಕಾರ ಇಂಧನ ಖರಿದೀಗೆ ರೇಷನ್ ವ್ಯವಸ್ಥೆ ಜಾರಿಗೆ ತರಲಿದೆ ಎನ್ನಲಾಗುತ್ತಿದೆ.

See also  ಶ್ರೀಲಂಕಾಗೆ ಭಾರತದ ಆಮ್ಲಜನಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು