News Karnataka Kannada
Tuesday, April 23 2024
Cricket
ವಿದೇಶ

ಇಟಲಿಯಲ್ಲಿ ಹಠಾತ್‌ ಪ್ರವಾಹ: 8 ಮಂದಿ ಸಾವು

Eight killed in floods
Photo Credit : IANS

ರೋಮ್: ಇಟಲಿಯಲ್ಲಿ ಉಂಟಾದ ಹಠಾತ್‌ ಪ್ರವಾಹದಿಂದ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. 12 ಸಾವಿರ ಮಂದಿ ನಿರಾಶ್ರಿತರಾಗಿದ್ದಾರೆ. ಕಟ್ಟಡಗಳ ಎತ್ತರದ ಮಹಡಿಗಳಲ್ಲಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.

ಈ ಮಧ್ಯೆ ಕಾಣೆಯಾದವರ ಸಂಖ್ಯೆ ಏರುತ್ತಿದ್ದು, ಸಾವಿನ ಸಂಖ್ಯೆ ಹೆಚ್ಷಾಗುವ ಆತಂಕ ಇದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, 48 ಗಂಟೆಗಳಲ್ಲಿ 50 ಸೆಂ.ಮೀ ಗಿಂತ ಹೆಚ್ಚು ಮಳೆಯಾಗಿದೆ. ಬೊನಾಸಿನಿ ಪ್ರದೇಶದಲ್ಲಿ ಅತಿಹೆಚ್ಚು ಮಳೆ ಮತ್ತು ಪ್ರವಾಹ ಸ್ಥಿತಿ ಎದುರಾಗಿದೆ.

ಇಟಲಿಯ ನಾಗರಿಕ ರಕ್ಷಣೆ ಮತ್ತು ಸಾಗರ ನೀತಿ ಸಚಿವ ನೆಲ್ಲೊ ಮುಸುಮೆಸಿ ತೊಂದರೆಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ, ತುರ್ತು ನಿಧಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು